ಹಲವಾರು ಸಮಾಜಿಕ ಕಾರ್ಯಕ್ರಮಗಳ ಜೊತೆಗೆ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲರನ್ನು ಒಗ್ಗೂಡಿಸಿ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ ತಾಲೂಕಿನ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜು ಶ್ಲಾಘಿಸಿದರು.
ನಗರದಲ್ಲಿನ ಭೋವಿ ಸಂಘದ ಕಚೇರಿಯಲ್ಲಿ ನಡೆದ ರಾಮಕೃಷ್ಣ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲೂಕಿನ ಎಲ್ಲಾ ಹಳ್ಳಿಗಳು ಭೋವಿ ಸಮುದಾಯದವರನ್ನು ಒಗ್ಗೂಡಿಸಿ ಆರ್ಥಿಕ, ಸಮಾಜಿಕ, ರಾಜಕೀಯ ಸೇರಿದಂತೆ ಎಲ್ಲಾ ವಲಯಗಳಲ್ಲಿ ಸದೃಢರಾಗುವಂತೆ ಮಾಡುತ್ತಿದ್ದಾರೆ ಎಂದರು.
ಈ ವೇಳೆ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದ ಸಮುದಾಯದ ಮುಖಂಡರು, ಸ್ನೇಹಿತರು, ಹಿತೈಷಿಗಳಿಗೆ ಧನ್ಯವಾದ ತಿಳಿಸುತ್ತಾ, ಸಮಾಜವನ್ನು ಉತ್ತಮ ರೀತಿಯಲ್ಲಿ ಕಟ್ಟುವಲ್ಲಿ ಶ್ರಮವಹಿಸುವೆ, ನನ್ನ ಎಲ್ಲಾ ಸಮಾಜಿಕ ಕಳಕಳಿಯ ಸೇವೆಗಳನ್ನು ಮುಂದುವರಿಸುತ್ತೇನೆ. ಸರ್ಕಾರವು ಒಳಮೀಸಲಾತಿಯನ್ನು ತಂದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಆದ್ದರಿಂದ ನಾವು ಒಳಮೀಸಲಾತಿಯನ್ನು ವಿರೋಧಿಸುತ್ತೇವೆ ಎಂದರು.
ಈ ವೇಳೆ ಭೋವಿ ಸಂಘದ ಹಿರಿಯ ಮಾಕಳಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…