ಹಲವಾರು ಸಮಾಜಿಕ ಕಾರ್ಯಕ್ರಮಗಳ ಜೊತೆಗೆ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲರನ್ನು ಒಗ್ಗೂಡಿಸಿ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ ತಾಲೂಕಿನ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜು ಶ್ಲಾಘಿಸಿದರು.
ನಗರದಲ್ಲಿನ ಭೋವಿ ಸಂಘದ ಕಚೇರಿಯಲ್ಲಿ ನಡೆದ ರಾಮಕೃಷ್ಣ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲೂಕಿನ ಎಲ್ಲಾ ಹಳ್ಳಿಗಳು ಭೋವಿ ಸಮುದಾಯದವರನ್ನು ಒಗ್ಗೂಡಿಸಿ ಆರ್ಥಿಕ, ಸಮಾಜಿಕ, ರಾಜಕೀಯ ಸೇರಿದಂತೆ ಎಲ್ಲಾ ವಲಯಗಳಲ್ಲಿ ಸದೃಢರಾಗುವಂತೆ ಮಾಡುತ್ತಿದ್ದಾರೆ ಎಂದರು.
ಈ ವೇಳೆ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದ ಸಮುದಾಯದ ಮುಖಂಡರು, ಸ್ನೇಹಿತರು, ಹಿತೈಷಿಗಳಿಗೆ ಧನ್ಯವಾದ ತಿಳಿಸುತ್ತಾ, ಸಮಾಜವನ್ನು ಉತ್ತಮ ರೀತಿಯಲ್ಲಿ ಕಟ್ಟುವಲ್ಲಿ ಶ್ರಮವಹಿಸುವೆ, ನನ್ನ ಎಲ್ಲಾ ಸಮಾಜಿಕ ಕಳಕಳಿಯ ಸೇವೆಗಳನ್ನು ಮುಂದುವರಿಸುತ್ತೇನೆ. ಸರ್ಕಾರವು ಒಳಮೀಸಲಾತಿಯನ್ನು ತಂದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಆದ್ದರಿಂದ ನಾವು ಒಳಮೀಸಲಾತಿಯನ್ನು ವಿರೋಧಿಸುತ್ತೇವೆ ಎಂದರು.
ಈ ವೇಳೆ ಭೋವಿ ಸಂಘದ ಹಿರಿಯ ಮಾಕಳಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…