ಒಳ‌ಮೀಸಲಾತಿಯನ್ನು ವಿರೋಧಿಸುತ್ತೇವೆ- ಭೋವಿ ಸಂಘದ ತಾಲೂಕು ಅಧ್ಯಕ್ಷ ರಾಮಕೃಷ್ಣ

ಹಲವಾರು ಸಮಾಜಿಕ ಕಾರ್ಯಕ್ರಮಗಳ ಜೊತೆಗೆ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲರನ್ನು ಒಗ್ಗೂಡಿಸಿ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ‌ ತಾಲೂಕಿನ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜು ಶ್ಲಾಘಿಸಿದರು.

ನಗರದಲ್ಲಿನ ಭೋವಿ ಸಂಘದ ಕಚೇರಿಯಲ್ಲಿ ನಡೆದ ರಾಮಕೃಷ್ಣ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತಾಲೂಕಿನ ಎಲ್ಲಾ ಹಳ್ಳಿಗಳು ಭೋವಿ ಸಮುದಾಯದವರನ್ನು ಒಗ್ಗೂಡಿಸಿ ಆರ್ಥಿಕ, ಸಮಾಜಿಕ, ರಾಜಕೀಯ ಸೇರಿದಂತೆ ಎಲ್ಲಾ ವಲಯಗಳಲ್ಲಿ ಸದೃಢರಾಗುವಂತೆ ಮಾಡುತ್ತಿದ್ದಾರೆ ಎಂದರು.

ಈ ವೇಳೆ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದ ಸಮುದಾಯದ ಮುಖಂಡರು, ಸ್ನೇಹಿತರು,‌ ಹಿತೈಷಿಗಳಿಗೆ ಧನ್ಯವಾದ ತಿಳಿಸುತ್ತಾ, ಸಮಾಜವನ್ನು ಉತ್ತಮ ರೀತಿಯಲ್ಲಿ ಕಟ್ಟುವಲ್ಲಿ ಶ್ರಮವಹಿಸುವೆ, ನನ್ನ ಎಲ್ಲಾ ಸಮಾಜಿಕ ಕಳಕಳಿಯ ಸೇವೆಗಳನ್ನು ಮುಂದುವರಿಸುತ್ತೇನೆ. ಸರ್ಕಾರವು ಒಳ‌ಮೀಸಲಾತಿಯನ್ನು ತಂದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಆದ್ದರಿಂದ ನಾವು ಒಳಮೀಸಲಾತಿಯನ್ನು ವಿರೋಧಿಸುತ್ತೇವೆ‌ ಎಂದರು.

ಈ ವೇಳೆ ಭೋವಿ ಸಂಘದ ಹಿರಿಯ ಮಾಕಳಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

8 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago