ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದ ವತಿಯಿಂದ ಮಾ.19ರಂದು ಬೆಳಗ್ಗೆ 10ಕ್ಕೆ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಒಳಮಿಸಲಾತಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನೆಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲು ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಸಮುದಾಯದ ಸಾವಿರಾರು ಮುಖಂಡರು, ಪ್ರಮುಖರು ಬಸ್ ಗಳ ಮೂಲಕ ತೆರಳಿದರು.
ಈ ಕುರಿತು ಮುಖಂಡ ಬಚ್ಚಳ್ಳಿ ನಾಗರಾಜು ಮಾತನಾಡಿ ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರದ ದತ್ತಾಂಶಗಳನ್ನು ಪರಿಗಣಿಸಿ ಬಿಳಂಬ ನೀತಿ ಅನುಸರಿಸದೆ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು, ಮಾದಿಗ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದರು ರಾಜ್ಯ ಸರ್ಕಾರ ಆದೇಶವನ್ನು ಜಾರಿಗೆ ತರಲು ಮುಂದಾಗುತ್ತಿಲ್ಲ , ಮುಖ್ಯಮಂತ್ರಿಗಳು ಈ ಕೂಡಲೇ ಯಥಾವತ್ತಾಗಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಲಿ ಇಲ್ಲವೇ ಕುರ್ಚಿ ಖಾಲಿ ಮಾಡಲಿ ಎಂದು ಆಗ್ರಹಿಸಿದರು.
ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಟ್ಟಿದ್ದರೆ ನಾವೇಗೆ ಹೋರಾಟಕ್ಕೆ ಮುಂದಾಗಬೇಕಿತ್ತು. ಇದು ನಮ್ಮ ಹಕ್ಕು, ಸುಪ್ರೀಂ ಕೋರ್ಟ್ ನೀಡುವ ಆದೇಶವನ್ನು ಯಥಾವತ್ತಾಗಿ ಸರ್ಕಾರ ಜಾರಿಗೊಳಿಸಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಮಾಡಲಿ ಎಂದರು.
ಪ್ರಮುಖ ಹಕ್ಕೋತ್ತಾಯಗಳು
ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಸರ್ಕಾರದಲ್ಲಿ ಲಭ್ಯವಿರುವ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ನೀತಿ ಅನುಸರಿಸದೆ ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.
ನ್ಯಾ. ಸದಾಶಿವ ಆಯೋಗದ ವರದಿ ಮತ್ತು ಒಳಮೀಸಲಾತಿ ವರ್ಗಿಕರಣದ ಶಿಫಾರಸ್ಸಗಳನ್ನು ಸಚಿವ ಸಂಪುಟದಲ್ಲಿ ಅಧಿಕೃತಗೊಳಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ. 17 ರ ಅನುಪಾತದಲ್ಲಿ ಹೆಚ್ಚುವರಿ ಶೇ. 2 ಮೀಸಲಾತಿಯನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 7% ಮೀಸಲಾತಿಯನ್ನು ನಿಗದಿಪಡಿಸಬೇಕು.
ಸಚಿವ ಸಂಪುಟವು ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಗಳನ್ನು ತಡೆಹಿಡಿಯಬೇಕು.
ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರ್ತಿಸಿ ಶೇ.1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಅಲೆಮಾರಿಗಳಿಗೆ ನ್ಯಾಯ ಒದಗಿಸಲು ಪ್ರತ್ಯೇಕ ಅಲೆಮಾರಿ ಆಯೋಗವನ್ನು ಸ್ಥಾಪಿಸಬೇಕು.
ಸಮಾಜ ಕಲ್ಯಾಣ ಇಲಾಖೆಯ ಬಜೆಟ್ನಲ್ಲಿ ಮತ್ತು ಎಸ್ಸಿಎಸ್ಪಿ/ಟಿಎಸ್ಪಿ ಅನುಧಾನವನ್ನು ಜನಸಂಖ್ಯಾವಾರು ಹಂಚಿಕೆ ಮಾಡಬೇಕು. ಮಾದಿಗ, ಸಮಗಾರ, ಡೋಹರ, ಮಚಗಾರ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕವಾಗಿ ನಿಗಮ ಮಂಡಳಿಗಳಿಗೆ ತಲಾ ಒಂದು ಸಾವಿರ ಕೋಟಿ ಅನುದಾನ ಮೀಸಲಿಟ್ಟು ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು.
ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರಾದ ರಾಮಮೂರ್ತಿ ರಾಮು ( ನೇರಳೆಘಟ್ಟ), ಕೆ ವಿ ಮುನಿಯಪ್ಪ, ಟಿ.ಡಿ.ಮುನಿಯಪ್ಪ, ಅಂಜನಮೂರ್ತಿ, ರಾಮಕೃಷ್ಣಪ್ಪ ಸೇರಿದಂತೆ ಹಲವು ಸಂಘಟನೆಗಳ ದಲಿತ ಮುಖಂಡರು ಉಪಸ್ಥಿತರಿದ್ದರು.
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…