ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹ: ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದ ವತಿಯಿಂದ ಮಾ.19ರಂದು ಬೆಳಗ್ಗೆ 10ಕ್ಕೆ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಒಳಮಿಸಲಾತಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನೆಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲು ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಸಮುದಾಯದ ಸಾವಿರಾರು ಮುಖಂಡರು, ಪ್ರಮುಖರು ಬಸ್ ಗಳ ಮೂಲಕ ತೆರಳಿದರು.

ಈ ಕುರಿತು ಮುಖಂಡ ಬಚ್ಚಳ್ಳಿ ನಾಗರಾಜು ಮಾತನಾಡಿ ಸುಪ್ರೀಂ‌ಕೋರ್ಟ್ ಆದೇಶದಂತೆ ಸರ್ಕಾರದ ದತ್ತಾಂಶಗಳನ್ನು ಪರಿಗಣಿಸಿ ಬಿಳಂಬ ನೀತಿ ಅನುಸರಿಸದೆ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು, ಮಾದಿಗ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದರು ರಾಜ್ಯ ಸರ್ಕಾರ ಆದೇಶವನ್ನು ಜಾರಿಗೆ ತರಲು ಮುಂದಾಗುತ್ತಿಲ್ಲ , ಮುಖ್ಯಮಂತ್ರಿಗಳು ಈ ಕೂಡಲೇ ಯಥಾವತ್ತಾಗಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಲಿ ಇಲ್ಲವೇ ಕುರ್ಚಿ ಖಾಲಿ ಮಾಡಲಿ ಎಂದು ಆಗ್ರಹಿಸಿದರು.

ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಟ್ಟಿದ್ದರೆ ನಾವೇಗೆ ಹೋರಾಟಕ್ಕೆ ಮುಂದಾಗಬೇಕಿತ್ತು. ಇದು ನಮ್ಮ ಹಕ್ಕು, ಸುಪ್ರೀಂ ಕೋರ್ಟ್ ನೀಡುವ ಆದೇಶವನ್ನು ಯಥಾವತ್ತಾಗಿ ಸರ್ಕಾರ ಜಾರಿಗೊಳಿಸಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಮಾಡಲಿ ಎಂದರು.

ಪ್ರಮುಖ ಹಕ್ಕೋತ್ತಾಯಗಳು

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಸರ್ಕಾರದಲ್ಲಿ ಲಭ್ಯವಿರುವ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ನೀತಿ ಅನುಸರಿಸದೆ ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.

ನ್ಯಾ. ಸದಾಶಿವ ಆಯೋಗದ ವರದಿ ಮತ್ತು ಒಳಮೀಸಲಾತಿ ವರ್ಗಿಕರಣದ ಶಿಫಾರಸ್ಸಗಳನ್ನು ಸಚಿವ ಸಂಪುಟದಲ್ಲಿ ಅಧಿಕೃತಗೊಳಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ. 17 ರ ಅನುಪಾತದಲ್ಲಿ ಹೆಚ್ಚುವರಿ ಶೇ. 2 ಮೀಸಲಾತಿಯನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 7% ಮೀಸಲಾತಿಯನ್ನು ನಿಗದಿಪಡಿಸಬೇಕು.

ಸಚಿವ ಸಂಪುಟವು ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಗಳನ್ನು ತಡೆಹಿಡಿಯಬೇಕು.

ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರ್ತಿಸಿ ಶೇ.1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಅಲೆಮಾರಿಗಳಿಗೆ ನ್ಯಾಯ ಒದಗಿಸಲು ಪ್ರತ್ಯೇಕ ಅಲೆಮಾರಿ ಆಯೋಗವನ್ನು ಸ್ಥಾಪಿಸಬೇಕು.

ಸಮಾಜ ಕಲ್ಯಾಣ ಇಲಾಖೆಯ ಬಜೆಟ್‌ನಲ್ಲಿ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುಧಾನವನ್ನು ಜನಸಂಖ್ಯಾವಾರು ಹಂಚಿಕೆ ಮಾಡಬೇಕು. ಮಾದಿಗ, ಸಮಗಾರ, ಡೋಹರ, ಮಚಗಾರ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕವಾಗಿ ನಿಗಮ ಮಂಡಳಿಗಳಿಗೆ ತಲಾ ಒಂದು ಸಾವಿರ ಕೋಟಿ ಅನುದಾನ ಮೀಸಲಿಟ್ಟು ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು.

ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರಾದ ರಾಮಮೂರ್ತಿ ರಾಮು ( ನೇರಳೆಘಟ್ಟ), ಕೆ ವಿ ಮುನಿಯಪ್ಪ, ಟಿ.ಡಿ.ಮುನಿಯಪ್ಪ, ಅಂಜನಮೂರ್ತಿ, ರಾಮಕೃಷ್ಣಪ್ಪ ಸೇರಿದಂತೆ ಹಲವು ಸಂಘಟನೆಗಳ ದಲಿತ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

1 hour ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

9 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

9 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

22 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

23 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

23 hours ago