ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹ: ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದ ವತಿಯಿಂದ ಮಾ.19ರಂದು ಬೆಳಗ್ಗೆ 10ಕ್ಕೆ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಒಳಮಿಸಲಾತಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನೆಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲು ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಸಮುದಾಯದ ಸಾವಿರಾರು ಮುಖಂಡರು, ಪ್ರಮುಖರು ಬಸ್ ಗಳ ಮೂಲಕ ತೆರಳಿದರು.

ಈ ಕುರಿತು ಮುಖಂಡ ಬಚ್ಚಳ್ಳಿ ನಾಗರಾಜು ಮಾತನಾಡಿ ಸುಪ್ರೀಂ‌ಕೋರ್ಟ್ ಆದೇಶದಂತೆ ಸರ್ಕಾರದ ದತ್ತಾಂಶಗಳನ್ನು ಪರಿಗಣಿಸಿ ಬಿಳಂಬ ನೀತಿ ಅನುಸರಿಸದೆ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು, ಮಾದಿಗ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದರು ರಾಜ್ಯ ಸರ್ಕಾರ ಆದೇಶವನ್ನು ಜಾರಿಗೆ ತರಲು ಮುಂದಾಗುತ್ತಿಲ್ಲ , ಮುಖ್ಯಮಂತ್ರಿಗಳು ಈ ಕೂಡಲೇ ಯಥಾವತ್ತಾಗಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಲಿ ಇಲ್ಲವೇ ಕುರ್ಚಿ ಖಾಲಿ ಮಾಡಲಿ ಎಂದು ಆಗ್ರಹಿಸಿದರು.

ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಟ್ಟಿದ್ದರೆ ನಾವೇಗೆ ಹೋರಾಟಕ್ಕೆ ಮುಂದಾಗಬೇಕಿತ್ತು. ಇದು ನಮ್ಮ ಹಕ್ಕು, ಸುಪ್ರೀಂ ಕೋರ್ಟ್ ನೀಡುವ ಆದೇಶವನ್ನು ಯಥಾವತ್ತಾಗಿ ಸರ್ಕಾರ ಜಾರಿಗೊಳಿಸಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಮಾಡಲಿ ಎಂದರು.

ಪ್ರಮುಖ ಹಕ್ಕೋತ್ತಾಯಗಳು

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಸರ್ಕಾರದಲ್ಲಿ ಲಭ್ಯವಿರುವ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ನೀತಿ ಅನುಸರಿಸದೆ ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.

ನ್ಯಾ. ಸದಾಶಿವ ಆಯೋಗದ ವರದಿ ಮತ್ತು ಒಳಮೀಸಲಾತಿ ವರ್ಗಿಕರಣದ ಶಿಫಾರಸ್ಸಗಳನ್ನು ಸಚಿವ ಸಂಪುಟದಲ್ಲಿ ಅಧಿಕೃತಗೊಳಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ. 17 ರ ಅನುಪಾತದಲ್ಲಿ ಹೆಚ್ಚುವರಿ ಶೇ. 2 ಮೀಸಲಾತಿಯನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 7% ಮೀಸಲಾತಿಯನ್ನು ನಿಗದಿಪಡಿಸಬೇಕು.

ಸಚಿವ ಸಂಪುಟವು ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಗಳನ್ನು ತಡೆಹಿಡಿಯಬೇಕು.

ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರ್ತಿಸಿ ಶೇ.1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಅಲೆಮಾರಿಗಳಿಗೆ ನ್ಯಾಯ ಒದಗಿಸಲು ಪ್ರತ್ಯೇಕ ಅಲೆಮಾರಿ ಆಯೋಗವನ್ನು ಸ್ಥಾಪಿಸಬೇಕು.

ಸಮಾಜ ಕಲ್ಯಾಣ ಇಲಾಖೆಯ ಬಜೆಟ್‌ನಲ್ಲಿ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುಧಾನವನ್ನು ಜನಸಂಖ್ಯಾವಾರು ಹಂಚಿಕೆ ಮಾಡಬೇಕು. ಮಾದಿಗ, ಸಮಗಾರ, ಡೋಹರ, ಮಚಗಾರ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕವಾಗಿ ನಿಗಮ ಮಂಡಳಿಗಳಿಗೆ ತಲಾ ಒಂದು ಸಾವಿರ ಕೋಟಿ ಅನುದಾನ ಮೀಸಲಿಟ್ಟು ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು.

ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರಾದ ರಾಮಮೂರ್ತಿ ರಾಮು ( ನೇರಳೆಘಟ್ಟ), ಕೆ ವಿ ಮುನಿಯಪ್ಪ, ಟಿ.ಡಿ.ಮುನಿಯಪ್ಪ, ಅಂಜನಮೂರ್ತಿ, ರಾಮಕೃಷ್ಣಪ್ಪ ಸೇರಿದಂತೆ ಹಲವು ಸಂಘಟನೆಗಳ ದಲಿತ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

4 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

5 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

6 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

8 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago