ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್ ಎ ಗೆ 5.25,  ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದ್ದು, ಇದು ಸ್ವಾಗತಾರ್ಹ, ಸುಮಾರು 40 ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು ತಿಳಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ. ಬಸವಣ್ಣವರ ಸಮಾನತೆ ತತ್ವವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ. ಈ ಪ್ರಕ್ರಿಯೆಯಲ್ಲಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಕಾನೂನು ಸಚಿವ ಎಚ್ ಕೆ ಪಾಟೀಲ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೆ ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರಕ್ಕೆ ಕೃತಜ್ಞತೆಗಳು ಎಂದು ತಿಳಿಸಿದರು.

ರಾಜ್ಯದ 101 ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ದಶಕಗಳ ಅನ್ಯಾಯಕ್ಕೆ ಅಂತ್ಯವಾಗಲಿದೆ. ಅದೇರೀತಿ ಎಡಗೈ–ಬಲಗೈ ವಿವಾದಕ್ಕೂ ಅಂತ್ಯ. ನಾವು ಎಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ ಎಂದು ತಿಳಿಸಿದರು.

ತಾಲ್ಲೂಕು ಅಧ್ಯಕ್ಷ ನಾಗರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು.‌ ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ 3%‌ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (ಡಿಪಿಎಆರ್) ಆದೇಶ ಹೊರಡಿಸಿದೆ. ಇದು ಸ್ವಾಗತಾರ್ಹ ಎಂದರು.

ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಉಪಾಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಂಘಟಕ ಬಿ.ಕೆ‌ ಶಿವಪ್ಪ, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ಜಿಲ್ಲಾ ಸಮಿತಿ ಸದಸ್ಯರಾದ ವಿಜಯ್ ಕುಮಾರ್, ವೀರಣ್ಣ, ವೆಂಕಟೇಶಯ್ಯ, ಶಿವಣ್ಣ, ತಾಲೂಕು ಅಧ್ಯಕ್ಷ ತಳವಾರ ನಾಗರಾಜ್, ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago