ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್ ಎ ಗೆ 5.25,  ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದ್ದು, ಇದು ಸ್ವಾಗತಾರ್ಹ, ಸುಮಾರು 40 ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು ತಿಳಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ. ಬಸವಣ್ಣವರ ಸಮಾನತೆ ತತ್ವವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ. ಈ ಪ್ರಕ್ರಿಯೆಯಲ್ಲಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಕಾನೂನು ಸಚಿವ ಎಚ್ ಕೆ ಪಾಟೀಲ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೆ ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರಕ್ಕೆ ಕೃತಜ್ಞತೆಗಳು ಎಂದು ತಿಳಿಸಿದರು.

ರಾಜ್ಯದ 101 ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ದಶಕಗಳ ಅನ್ಯಾಯಕ್ಕೆ ಅಂತ್ಯವಾಗಲಿದೆ. ಅದೇರೀತಿ ಎಡಗೈ–ಬಲಗೈ ವಿವಾದಕ್ಕೂ ಅಂತ್ಯ. ನಾವು ಎಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ ಎಂದು ತಿಳಿಸಿದರು.

ತಾಲ್ಲೂಕು ಅಧ್ಯಕ್ಷ ನಾಗರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು.‌ ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ 3%‌ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (ಡಿಪಿಎಆರ್) ಆದೇಶ ಹೊರಡಿಸಿದೆ. ಇದು ಸ್ವಾಗತಾರ್ಹ ಎಂದರು.

ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಉಪಾಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಂಘಟಕ ಬಿ.ಕೆ‌ ಶಿವಪ್ಪ, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ಜಿಲ್ಲಾ ಸಮಿತಿ ಸದಸ್ಯರಾದ ವಿಜಯ್ ಕುಮಾರ್, ವೀರಣ್ಣ, ವೆಂಕಟೇಶಯ್ಯ, ಶಿವಣ್ಣ, ತಾಲೂಕು ಅಧ್ಯಕ್ಷ ತಳವಾರ ನಾಗರಾಜ್, ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

6 minutes ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

10 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

13 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

18 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

19 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

19 hours ago