ಒಳಮೀಸಲಾತಿ ವಿಚಾರ: ನ್ಯಾ.ನಾಗಮೋಹನ್ ದಾಸ್ ವರದಿ ತಿರಸ್ಕಾರಕ್ಕೆ ಒತ್ತಾಯ: ಮಾ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಸಾವಿರಾರು ಬಲಗೈ ಸಮುದಾಯದ ಬಂಧುಗಳು ಭಾಗವಹಿಸಬೇಕು ಎಂದು ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮನವಿ ಮಾಡಿದರು.

ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬಲಗೈ ಜಾತಿ ಸಮುದಾಯವರಿಂದ ವತಿಯಿಂದ ಮಾ.25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿಯನ್ನು ಕೂಡಲೇ ತಿರಸ್ಕರಿಸಬೇಕು, ಇಷ್ಟು ದಿವಸ ಹೊಲಯ ಹಾಗೂ ಮಾದಿಗರು ಸಹೋದರರೆಂದು ಭಾವಿಸಿದ್ದೆವು ಆದರೆ ಅವರ ಮನಸ್ಸುಗಳ ಮಧ್ಯೆ ಬೆಂಕಿ ಹಿಡುವ ಕೆಲಸವನ್ನು ಮಾಡಿದ್ದಾರೆ. ಒಳಮೀಸಲಾತಿ ಆಯೋಗದ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಆನಂದ್ ಮಾತನಾಡಿ, ರಾಜ್ಯದಲ್ಲಿ ಸುಮಾರು 30 ಲಕ್ಷ ಇದ್ದ ಬಲಗೈ ಸಮಾಜದ ಜನಸಂಖ್ಯೆಯನ್ನು 24 ಲಕ್ಷಕ್ಕೆ ತಂದಿದ್ದಾರೆ. ಒಳಮೀಸಲಾತಿ ಹಂಚಿಕೆ ಮುನ್ನೆಲೆಗೆ ಬಂದ ಮೇಲೆ ಅದು ಸುಳ್ಳೆಂಬುದು ಸಾಬೀತಾಗಿದೆ. ಸಮೀಕ್ಷೆಯಲ್ಲಿ ಹೊಲೆಯ ಜನಾಂಗದವರು ಸರಿಯಾಗಿ ಪಾಲ್ಗೊಳ್ಳದೇ ವ್ಯತ್ಯಾಸವಾಗಿದೆ. ಪ್ರಾದೇಶಿಕವಾರು ಭಿನ್ನಭಿನ್ನವಾಗಿ ಜಾತಿಯನ್ನು ನಮೂದಿಸಿ ತೊಂದರೆಗೆ ಸಿಲಿಕಿದ್ದಾರೆ ಇದು ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿದೆ ಮುಂಬರುವ ಮಾರ್ಚ್ 27 ರ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.

ಎಂಪಿಸಿಎಸ್ ನಿರ್ದೇಶಕ ಹಾಗೂ ಮುಖಂಡ ಎಂ ರಾಮಾಂಜಿನಪ್ಪ ಮಾತನಾಡಿ‌, ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರು ಸಮೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸದೇ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಗತ್ಯ ಅಂಕಿಅಂಶಗಳನ್ನು ಕ್ರೂಢೀಕರಿಸದೇ ಒಂದು ಜಾತಿಯನ್ನು ಒಲೈಸಲು ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆಯನ್ನು 04 ಭಾಗಗಳಾಗಿ ವಿಂಗಡಿಸಿ 1.38ಲಕ್ಷ ಬಲಗೈ ಸಮುದಾಯದ ಜನಸಂಖ್ಯೆಯನ್ನು ಅಲೆಮಾರಿ ಗುಂಪಿಗೆ, 2,58,915 ಜನಸಂಖ್ಯೆಯನ್ನು ಮಾದಿಗರ ಗುಂಪಿಗೆ ಸರ್ಕಾರದ ನಿಬಂಧನೆಗಳಿಗೆ ವಿರುದ್ಧವಾಗಿ 4,74,954 ಜನರನ್ನು ಆದಿಕರ್ನಾಟಕ, ಆದಿ-ದ್ರಾವಿಡ ಹಾಗೂ ಆದಿ-ಆಂಧ್ರಗಳೆಂದು ವಿಂಗಡಿಸಿ ಶೇಕಡ 1ರಷ್ಟು ಮೀಸಲಾತಿ ನಿಗದಿಪಡಿಸಲು ಶಿಫಾರಸ್ಸು ಮಾಡಿರುವುದಲ್ಲದೇ ಜನರಲ್ ಮೆರಿಟ್ ನಲ್ಲಿ ನೇಮಕವಾಗಿರುವ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ನೌಕರರನ್ನು ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿರುವುದಲ್ಲದೇ ಸಾಮಾನ್ಯ ಸ್ಥಾನಗಳಲ್ಲಿ ಗೆದ್ದಿರುವ ಜನಪ್ರತಿನಿಧಿಗಳನ್ನು ಬಲಗೈ ಜನ ಪ್ರತಿನಿಧಿಗಳ ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿ ದುರುದ್ದೇಶ ಪೂರಿತವಾದ ಪಕ್ಷಪಾತದಿಂದ ಕೂಡಿದ ವರದಿಯನ್ನು ಸಿದ್ದಪಡಿಸಿ ಚೆನ್ನಾಗಿ ಉಂಡವರು, ತ್ಯಾಗ ಮಾಡಬೇಕು ಎಂದು ಉದ್ದೇಶ ಪೂರ್ವಕವಾಗಿಯೇ ಬಲಗೈ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೌಲಭ್ಯ ದೊರೆಯದಂತೆ ವರದಿ ನೀಡಿರುತ್ತಾರೆ. ಸದರಿ ವರದಿಯನ್ವಯ ರಾಜ್ಯ ಸರ್ಕಾವು ಪರಿಶಿಷ್ಟ ಜಾತಿಯ ಬಲಗೈ ಸಮುದಾಯವನ್ನು ಗ್ರೂಫ್-“ಬಿ”ಗೆ ಸೇರಿಸುವುದರ ಮೂಲಕ ಯಾವುದೇ ಉನ್ನತ ಹುದ್ದೆಗಳು ಹೊಲಯ/ಛಲವಾದಿ ಬಲಗೈ ಸಮುದಾಯಕ್ಕೆ ಸಿಗದಂತೆ ರೋಸ್ಟ‌ರ್ ಬಿಂದುಗಳನ್ನು ನಿಗದಿಪಡಿಸಿರುತ್ತದೆ ಎಂದರು.

ಈ ಸಂದರ್ಭದಲ್ಲಿ ರಮೇಶ್, ಸಂಜೀವಪ್ಪ, ಕೃಷ್ಣಪ್ಪ, ಆಂಜಿನಪ್ಪ, ರಾಜಣ್ಣ ಸೇರಿದಂತೆ ಬಲಗೈ ಸಮುದಾಯದ ಹಲವಾರು ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

29 minutes ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

2 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

2 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

4 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

7 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

8 hours ago