ಒಳಮೀಸಲಾತಿ ವಿಚಾರ: ನ್ಯಾ.ನಾಗಮೋಹನ್ ದಾಸ್ ವರದಿ ತಿರಸ್ಕಾರಕ್ಕೆ ಒತ್ತಾಯ: ಮಾ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಸಾವಿರಾರು ಬಲಗೈ ಸಮುದಾಯದ ಬಂಧುಗಳು ಭಾಗವಹಿಸಬೇಕು ಎಂದು ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮನವಿ ಮಾಡಿದರು.

ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬಲಗೈ ಜಾತಿ ಸಮುದಾಯವರಿಂದ ವತಿಯಿಂದ ಮಾ.25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿಯನ್ನು ಕೂಡಲೇ ತಿರಸ್ಕರಿಸಬೇಕು, ಇಷ್ಟು ದಿವಸ ಹೊಲಯ ಹಾಗೂ ಮಾದಿಗರು ಸಹೋದರರೆಂದು ಭಾವಿಸಿದ್ದೆವು ಆದರೆ ಅವರ ಮನಸ್ಸುಗಳ ಮಧ್ಯೆ ಬೆಂಕಿ ಹಿಡುವ ಕೆಲಸವನ್ನು ಮಾಡಿದ್ದಾರೆ. ಒಳಮೀಸಲಾತಿ ಆಯೋಗದ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಆನಂದ್ ಮಾತನಾಡಿ, ರಾಜ್ಯದಲ್ಲಿ ಸುಮಾರು 30 ಲಕ್ಷ ಇದ್ದ ಬಲಗೈ ಸಮಾಜದ ಜನಸಂಖ್ಯೆಯನ್ನು 24 ಲಕ್ಷಕ್ಕೆ ತಂದಿದ್ದಾರೆ. ಒಳಮೀಸಲಾತಿ ಹಂಚಿಕೆ ಮುನ್ನೆಲೆಗೆ ಬಂದ ಮೇಲೆ ಅದು ಸುಳ್ಳೆಂಬುದು ಸಾಬೀತಾಗಿದೆ. ಸಮೀಕ್ಷೆಯಲ್ಲಿ ಹೊಲೆಯ ಜನಾಂಗದವರು ಸರಿಯಾಗಿ ಪಾಲ್ಗೊಳ್ಳದೇ ವ್ಯತ್ಯಾಸವಾಗಿದೆ. ಪ್ರಾದೇಶಿಕವಾರು ಭಿನ್ನಭಿನ್ನವಾಗಿ ಜಾತಿಯನ್ನು ನಮೂದಿಸಿ ತೊಂದರೆಗೆ ಸಿಲಿಕಿದ್ದಾರೆ ಇದು ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿದೆ ಮುಂಬರುವ ಮಾರ್ಚ್ 27 ರ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.

ಎಂಪಿಸಿಎಸ್ ನಿರ್ದೇಶಕ ಹಾಗೂ ಮುಖಂಡ ಎಂ ರಾಮಾಂಜಿನಪ್ಪ ಮಾತನಾಡಿ‌, ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರು ಸಮೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸದೇ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಗತ್ಯ ಅಂಕಿಅಂಶಗಳನ್ನು ಕ್ರೂಢೀಕರಿಸದೇ ಒಂದು ಜಾತಿಯನ್ನು ಒಲೈಸಲು ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆಯನ್ನು 04 ಭಾಗಗಳಾಗಿ ವಿಂಗಡಿಸಿ 1.38ಲಕ್ಷ ಬಲಗೈ ಸಮುದಾಯದ ಜನಸಂಖ್ಯೆಯನ್ನು ಅಲೆಮಾರಿ ಗುಂಪಿಗೆ, 2,58,915 ಜನಸಂಖ್ಯೆಯನ್ನು ಮಾದಿಗರ ಗುಂಪಿಗೆ ಸರ್ಕಾರದ ನಿಬಂಧನೆಗಳಿಗೆ ವಿರುದ್ಧವಾಗಿ 4,74,954 ಜನರನ್ನು ಆದಿಕರ್ನಾಟಕ, ಆದಿ-ದ್ರಾವಿಡ ಹಾಗೂ ಆದಿ-ಆಂಧ್ರಗಳೆಂದು ವಿಂಗಡಿಸಿ ಶೇಕಡ 1ರಷ್ಟು ಮೀಸಲಾತಿ ನಿಗದಿಪಡಿಸಲು ಶಿಫಾರಸ್ಸು ಮಾಡಿರುವುದಲ್ಲದೇ ಜನರಲ್ ಮೆರಿಟ್ ನಲ್ಲಿ ನೇಮಕವಾಗಿರುವ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ನೌಕರರನ್ನು ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿರುವುದಲ್ಲದೇ ಸಾಮಾನ್ಯ ಸ್ಥಾನಗಳಲ್ಲಿ ಗೆದ್ದಿರುವ ಜನಪ್ರತಿನಿಧಿಗಳನ್ನು ಬಲಗೈ ಜನ ಪ್ರತಿನಿಧಿಗಳ ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿ ದುರುದ್ದೇಶ ಪೂರಿತವಾದ ಪಕ್ಷಪಾತದಿಂದ ಕೂಡಿದ ವರದಿಯನ್ನು ಸಿದ್ದಪಡಿಸಿ ಚೆನ್ನಾಗಿ ಉಂಡವರು, ತ್ಯಾಗ ಮಾಡಬೇಕು ಎಂದು ಉದ್ದೇಶ ಪೂರ್ವಕವಾಗಿಯೇ ಬಲಗೈ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೌಲಭ್ಯ ದೊರೆಯದಂತೆ ವರದಿ ನೀಡಿರುತ್ತಾರೆ. ಸದರಿ ವರದಿಯನ್ವಯ ರಾಜ್ಯ ಸರ್ಕಾವು ಪರಿಶಿಷ್ಟ ಜಾತಿಯ ಬಲಗೈ ಸಮುದಾಯವನ್ನು ಗ್ರೂಫ್-“ಬಿ”ಗೆ ಸೇರಿಸುವುದರ ಮೂಲಕ ಯಾವುದೇ ಉನ್ನತ ಹುದ್ದೆಗಳು ಹೊಲಯ/ಛಲವಾದಿ ಬಲಗೈ ಸಮುದಾಯಕ್ಕೆ ಸಿಗದಂತೆ ರೋಸ್ಟ‌ರ್ ಬಿಂದುಗಳನ್ನು ನಿಗದಿಪಡಿಸಿರುತ್ತದೆ ಎಂದರು.

ಈ ಸಂದರ್ಭದಲ್ಲಿ ರಮೇಶ್, ಸಂಜೀವಪ್ಪ, ಕೃಷ್ಣಪ್ಪ, ಆಂಜಿನಪ್ಪ, ರಾಜಣ್ಣ ಸೇರಿದಂತೆ ಬಲಗೈ ಸಮುದಾಯದ ಹಲವಾರು ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

4 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

7 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

22 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago