Categories: ರಾಜ್ಯ

ಒಳ ಮೀಸಲಾತಿಯನ್ನು ಅನುಷ್ಠಾನ ಮಾಡಿಯೇ ತೀರುತ್ತೇವೆ – ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಉಶಾ ಮೆಹ್ತಾ ವರದಿಯನ್ನು ಜಾರಿಗೊಳಿಸಲು ಯಾರು ಮುಂದಾಗಲಿಲ್ಲ. 2014 ರಿಂದ ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರವಿಲ್ಲದ ಕಾರಣ ಈ ಒಂದು ಮೀಸಲಾತಿಯ ಅನುಷ್ಠಾನ ವಾಗಲಿಲ್ಲ. ನೊಂದು ಬೆಂದ ಸಮುದಾಯ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಯಾಗಿಲ್ಲ. ಸರ್ಕಾರಿ ನೌಕರಿ ಇರಬಹುದು, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿಯೂ ಅಭಿವೃದ್ಧಿ ಕಾಣದ ಸಮುದಾಯವೆಂದರೆ ಅದು ಈ ಮಾದಿಗ ಸಮುದಾಯ. ನಮ್ಮ ಸರ್ಕಾರ ಈಗಾಗಲೇ ಹೈಕೋರ್ಟ್ ನ ನ್ಯಾಯಾಧೀಶ ನಾಗಮೋಹನ ದಾಸ್ ರವರ ನೇತೃತ್ವದಲ್ಲಿ ಏಕ ಸದಸ್ಯ ಪೀಠವನ್ನು ರಚಿಸಿ 3 ತಿಂಗಳಲ್ಲಿ ವರದಿಯನ್ನು ಪಡೆದು ಜಾರಿಗೊಳಿಸಲು ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹ ಈ ಒಳ ಮೀಸಲಾತಿ ಜಾರಿಗೊಳಿಸಲು ಬದ್ದರಾಗಿದ್ದು , ಪಕ್ಷಾತೀತವಾಗಿ ಎಲ್ಲಾ ನಾಯಕರು ಬೆಂಬಲವನ್ನು ನೀಡಿದ್ದು, ಆದಷ್ಟು ಬೇಗ ಜಾರಿಗೊಳಿಸುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ನಮ್ಮ ರಾಜ್ಯದ ಪರಿಶಿಷ್ಟಜಾತಿಯಲ್ಲಿ ಸುಮಾರು 101 ಉಪ ಜಾತಿಗಳಿದ್ದು, ಆಂದ್ರಪ್ರದೇಶದಲ್ಲಿ ಎಸ್ಸಿ ಸಮುದಾಯದಲ್ಲಿ 57 ಉಪ ಜಾತಿಗಳಿವೆ. ಈ ಎಲ್ಲಾ ಉಪ ಜಾತಿಗಳಿಗೂ ಕಾನೂನಿನ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ ಎಂದರು.

ಯಾವ ಜಾತಿಯವರಿಗೂ ತೊಂದರೆಯಾಗದಂತೆ ಎಲ್ಲಾರಿಗೂ ಸಮ ಪಾಲು ಸಮಬಾಳು ಎಂಬ ವಾಕ್ಯದಂತೆ ನಾವು ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡುತ್ತದೆ ಎಂದರು.

ಒಳಮೀಸಲಾತಿ ಕುರಿತು ಮೊದಲ ಮೂರು ಸಚಿವ ಸಂಪುಟದ ಸಭೆಯಲ್ಲಿಯೂ ಮಹದೇವಪ್ಪ ಇದರ ಜಾರಿಯ ಕುರಿತು ದ್ವನಿಗೂಡಿಸಿದ್ದಾರೆ ಎಂದು ಹೇಳಿದರು.

ಹಂತ ಹಂತವಾಗಿ ಕಾನೂನಿನ ತೊಡಕು ಆಗದಂತೆ ವರದಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಚರ್ಚಿಸಿ ಇದನ್ನು ಅನುಷ್ಠಾನ ಮಾಡಬೇಕಾಗುತ್ತದೆ ಎಂದರು.

ಈ ರೀತಿಯಾಗಿ ಹಂತ ಹಂತವಾಗಿ ಮಾಡಬೇಕಾಗುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ತಾವು ತಾಳ್ಮೆಯಿಂದ ಇರಬೇಕು. ನಮ್ಮ ಸರ್ಕಾರ ಶತಾಯ ಗತಾಯ ಜಾರಿಗೊಳಿಸಲು ಬದ್ದವಾಗಿದೆ. ಯಾವುದೇ ಹೋರಾಟಗಳ ಅಗತ್ಯವಿಲ್ಲಾ ತಾವು ಶಾಂತವಾಗಿರಿ ಎಂದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಮಾದಾರ ಚನ್ನಯ್ಯಸ್ವಾಮೀಜಿ, ಆನಂದಮುನಿ‌ ಸ್ವಾಮೀಜಿ, ಸಚಿವರಾದ ಮಹದೇವಪ್ಪ, ಆರ್.ಬಿ.ತಿಮ್ಮಪುರ,ಸತೀಶ್ ಜಾರಕಿಹೋಳಿ,ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್,ಅರವಿಂದ್ ಬೆಲ್ಲದ್, ಸಂಸದ ಗೋವಿಂದ ಕಾರಜೋಳ,ಎ.ನಾರಾಯಣಸ್ವಾಮಿ ಹಾಗೂ ಶಾಸಕರು,ಸಮುದಾಯದ ಮುಖಂಡರು, ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

2 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

14 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

14 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

15 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

17 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

1 day ago