Categories: ರಾಜ್ಯ

ಒಳ ಮೀಸಲಾತಿಯನ್ನು ಅನುಷ್ಠಾನ ಮಾಡಿಯೇ ತೀರುತ್ತೇವೆ – ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಉಶಾ ಮೆಹ್ತಾ ವರದಿಯನ್ನು ಜಾರಿಗೊಳಿಸಲು ಯಾರು ಮುಂದಾಗಲಿಲ್ಲ. 2014 ರಿಂದ ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರವಿಲ್ಲದ ಕಾರಣ ಈ ಒಂದು ಮೀಸಲಾತಿಯ ಅನುಷ್ಠಾನ ವಾಗಲಿಲ್ಲ. ನೊಂದು ಬೆಂದ ಸಮುದಾಯ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಯಾಗಿಲ್ಲ. ಸರ್ಕಾರಿ ನೌಕರಿ ಇರಬಹುದು, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿಯೂ ಅಭಿವೃದ್ಧಿ ಕಾಣದ ಸಮುದಾಯವೆಂದರೆ ಅದು ಈ ಮಾದಿಗ ಸಮುದಾಯ. ನಮ್ಮ ಸರ್ಕಾರ ಈಗಾಗಲೇ ಹೈಕೋರ್ಟ್ ನ ನ್ಯಾಯಾಧೀಶ ನಾಗಮೋಹನ ದಾಸ್ ರವರ ನೇತೃತ್ವದಲ್ಲಿ ಏಕ ಸದಸ್ಯ ಪೀಠವನ್ನು ರಚಿಸಿ 3 ತಿಂಗಳಲ್ಲಿ ವರದಿಯನ್ನು ಪಡೆದು ಜಾರಿಗೊಳಿಸಲು ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹ ಈ ಒಳ ಮೀಸಲಾತಿ ಜಾರಿಗೊಳಿಸಲು ಬದ್ದರಾಗಿದ್ದು , ಪಕ್ಷಾತೀತವಾಗಿ ಎಲ್ಲಾ ನಾಯಕರು ಬೆಂಬಲವನ್ನು ನೀಡಿದ್ದು, ಆದಷ್ಟು ಬೇಗ ಜಾರಿಗೊಳಿಸುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ನಮ್ಮ ರಾಜ್ಯದ ಪರಿಶಿಷ್ಟಜಾತಿಯಲ್ಲಿ ಸುಮಾರು 101 ಉಪ ಜಾತಿಗಳಿದ್ದು, ಆಂದ್ರಪ್ರದೇಶದಲ್ಲಿ ಎಸ್ಸಿ ಸಮುದಾಯದಲ್ಲಿ 57 ಉಪ ಜಾತಿಗಳಿವೆ. ಈ ಎಲ್ಲಾ ಉಪ ಜಾತಿಗಳಿಗೂ ಕಾನೂನಿನ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ ಎಂದರು.

ಯಾವ ಜಾತಿಯವರಿಗೂ ತೊಂದರೆಯಾಗದಂತೆ ಎಲ್ಲಾರಿಗೂ ಸಮ ಪಾಲು ಸಮಬಾಳು ಎಂಬ ವಾಕ್ಯದಂತೆ ನಾವು ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡುತ್ತದೆ ಎಂದರು.

ಒಳಮೀಸಲಾತಿ ಕುರಿತು ಮೊದಲ ಮೂರು ಸಚಿವ ಸಂಪುಟದ ಸಭೆಯಲ್ಲಿಯೂ ಮಹದೇವಪ್ಪ ಇದರ ಜಾರಿಯ ಕುರಿತು ದ್ವನಿಗೂಡಿಸಿದ್ದಾರೆ ಎಂದು ಹೇಳಿದರು.

ಹಂತ ಹಂತವಾಗಿ ಕಾನೂನಿನ ತೊಡಕು ಆಗದಂತೆ ವರದಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಚರ್ಚಿಸಿ ಇದನ್ನು ಅನುಷ್ಠಾನ ಮಾಡಬೇಕಾಗುತ್ತದೆ ಎಂದರು.

ಈ ರೀತಿಯಾಗಿ ಹಂತ ಹಂತವಾಗಿ ಮಾಡಬೇಕಾಗುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ತಾವು ತಾಳ್ಮೆಯಿಂದ ಇರಬೇಕು. ನಮ್ಮ ಸರ್ಕಾರ ಶತಾಯ ಗತಾಯ ಜಾರಿಗೊಳಿಸಲು ಬದ್ದವಾಗಿದೆ. ಯಾವುದೇ ಹೋರಾಟಗಳ ಅಗತ್ಯವಿಲ್ಲಾ ತಾವು ಶಾಂತವಾಗಿರಿ ಎಂದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಮಾದಾರ ಚನ್ನಯ್ಯಸ್ವಾಮೀಜಿ, ಆನಂದಮುನಿ‌ ಸ್ವಾಮೀಜಿ, ಸಚಿವರಾದ ಮಹದೇವಪ್ಪ, ಆರ್.ಬಿ.ತಿಮ್ಮಪುರ,ಸತೀಶ್ ಜಾರಕಿಹೋಳಿ,ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್,ಅರವಿಂದ್ ಬೆಲ್ಲದ್, ಸಂಸದ ಗೋವಿಂದ ಕಾರಜೋಳ,ಎ.ನಾರಾಯಣಸ್ವಾಮಿ ಹಾಗೂ ಶಾಸಕರು,ಸಮುದಾಯದ ಮುಖಂಡರು, ಉಪಸ್ಥಿತರಿದ್ದರು.

Ramesh Babu

Journalist

Share
Published by
Ramesh Babu

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

7 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

8 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

9 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

9 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

12 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

20 hours ago