Categories: ರಾಜ್ಯ

ಒಳ ಮೀಸಲಾತಿಯನ್ನು ಅನುಷ್ಠಾನ ಮಾಡಿಯೇ ತೀರುತ್ತೇವೆ – ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಉಶಾ ಮೆಹ್ತಾ ವರದಿಯನ್ನು ಜಾರಿಗೊಳಿಸಲು ಯಾರು ಮುಂದಾಗಲಿಲ್ಲ. 2014 ರಿಂದ ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರವಿಲ್ಲದ ಕಾರಣ ಈ ಒಂದು ಮೀಸಲಾತಿಯ ಅನುಷ್ಠಾನ ವಾಗಲಿಲ್ಲ. ನೊಂದು ಬೆಂದ ಸಮುದಾಯ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಯಾಗಿಲ್ಲ. ಸರ್ಕಾರಿ ನೌಕರಿ ಇರಬಹುದು, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿಯೂ ಅಭಿವೃದ್ಧಿ ಕಾಣದ ಸಮುದಾಯವೆಂದರೆ ಅದು ಈ ಮಾದಿಗ ಸಮುದಾಯ. ನಮ್ಮ ಸರ್ಕಾರ ಈಗಾಗಲೇ ಹೈಕೋರ್ಟ್ ನ ನ್ಯಾಯಾಧೀಶ ನಾಗಮೋಹನ ದಾಸ್ ರವರ ನೇತೃತ್ವದಲ್ಲಿ ಏಕ ಸದಸ್ಯ ಪೀಠವನ್ನು ರಚಿಸಿ 3 ತಿಂಗಳಲ್ಲಿ ವರದಿಯನ್ನು ಪಡೆದು ಜಾರಿಗೊಳಿಸಲು ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹ ಈ ಒಳ ಮೀಸಲಾತಿ ಜಾರಿಗೊಳಿಸಲು ಬದ್ದರಾಗಿದ್ದು , ಪಕ್ಷಾತೀತವಾಗಿ ಎಲ್ಲಾ ನಾಯಕರು ಬೆಂಬಲವನ್ನು ನೀಡಿದ್ದು, ಆದಷ್ಟು ಬೇಗ ಜಾರಿಗೊಳಿಸುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ನಮ್ಮ ರಾಜ್ಯದ ಪರಿಶಿಷ್ಟಜಾತಿಯಲ್ಲಿ ಸುಮಾರು 101 ಉಪ ಜಾತಿಗಳಿದ್ದು, ಆಂದ್ರಪ್ರದೇಶದಲ್ಲಿ ಎಸ್ಸಿ ಸಮುದಾಯದಲ್ಲಿ 57 ಉಪ ಜಾತಿಗಳಿವೆ. ಈ ಎಲ್ಲಾ ಉಪ ಜಾತಿಗಳಿಗೂ ಕಾನೂನಿನ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ ಎಂದರು.

ಯಾವ ಜಾತಿಯವರಿಗೂ ತೊಂದರೆಯಾಗದಂತೆ ಎಲ್ಲಾರಿಗೂ ಸಮ ಪಾಲು ಸಮಬಾಳು ಎಂಬ ವಾಕ್ಯದಂತೆ ನಾವು ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡುತ್ತದೆ ಎಂದರು.

ಒಳಮೀಸಲಾತಿ ಕುರಿತು ಮೊದಲ ಮೂರು ಸಚಿವ ಸಂಪುಟದ ಸಭೆಯಲ್ಲಿಯೂ ಮಹದೇವಪ್ಪ ಇದರ ಜಾರಿಯ ಕುರಿತು ದ್ವನಿಗೂಡಿಸಿದ್ದಾರೆ ಎಂದು ಹೇಳಿದರು.

ಹಂತ ಹಂತವಾಗಿ ಕಾನೂನಿನ ತೊಡಕು ಆಗದಂತೆ ವರದಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಚರ್ಚಿಸಿ ಇದನ್ನು ಅನುಷ್ಠಾನ ಮಾಡಬೇಕಾಗುತ್ತದೆ ಎಂದರು.

ಈ ರೀತಿಯಾಗಿ ಹಂತ ಹಂತವಾಗಿ ಮಾಡಬೇಕಾಗುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ತಾವು ತಾಳ್ಮೆಯಿಂದ ಇರಬೇಕು. ನಮ್ಮ ಸರ್ಕಾರ ಶತಾಯ ಗತಾಯ ಜಾರಿಗೊಳಿಸಲು ಬದ್ದವಾಗಿದೆ. ಯಾವುದೇ ಹೋರಾಟಗಳ ಅಗತ್ಯವಿಲ್ಲಾ ತಾವು ಶಾಂತವಾಗಿರಿ ಎಂದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಮಾದಾರ ಚನ್ನಯ್ಯಸ್ವಾಮೀಜಿ, ಆನಂದಮುನಿ‌ ಸ್ವಾಮೀಜಿ, ಸಚಿವರಾದ ಮಹದೇವಪ್ಪ, ಆರ್.ಬಿ.ತಿಮ್ಮಪುರ,ಸತೀಶ್ ಜಾರಕಿಹೋಳಿ,ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್,ಅರವಿಂದ್ ಬೆಲ್ಲದ್, ಸಂಸದ ಗೋವಿಂದ ಕಾರಜೋಳ,ಎ.ನಾರಾಯಣಸ್ವಾಮಿ ಹಾಗೂ ಶಾಸಕರು,ಸಮುದಾಯದ ಮುಖಂಡರು, ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

8 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

14 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

15 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

18 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

19 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago