Categories: ರಾಜ್ಯ

ಒಳ ಮೀಸಲಾತಿಯನ್ನು ಅನುಷ್ಠಾನ ಮಾಡಿಯೇ ತೀರುತ್ತೇವೆ – ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಉಶಾ ಮೆಹ್ತಾ ವರದಿಯನ್ನು ಜಾರಿಗೊಳಿಸಲು ಯಾರು ಮುಂದಾಗಲಿಲ್ಲ. 2014 ರಿಂದ ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರವಿಲ್ಲದ ಕಾರಣ ಈ ಒಂದು ಮೀಸಲಾತಿಯ ಅನುಷ್ಠಾನ ವಾಗಲಿಲ್ಲ. ನೊಂದು ಬೆಂದ ಸಮುದಾಯ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಯಾಗಿಲ್ಲ. ಸರ್ಕಾರಿ ನೌಕರಿ ಇರಬಹುದು, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿಯೂ ಅಭಿವೃದ್ಧಿ ಕಾಣದ ಸಮುದಾಯವೆಂದರೆ ಅದು ಈ ಮಾದಿಗ ಸಮುದಾಯ. ನಮ್ಮ ಸರ್ಕಾರ ಈಗಾಗಲೇ ಹೈಕೋರ್ಟ್ ನ ನ್ಯಾಯಾಧೀಶ ನಾಗಮೋಹನ ದಾಸ್ ರವರ ನೇತೃತ್ವದಲ್ಲಿ ಏಕ ಸದಸ್ಯ ಪೀಠವನ್ನು ರಚಿಸಿ 3 ತಿಂಗಳಲ್ಲಿ ವರದಿಯನ್ನು ಪಡೆದು ಜಾರಿಗೊಳಿಸಲು ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹ ಈ ಒಳ ಮೀಸಲಾತಿ ಜಾರಿಗೊಳಿಸಲು ಬದ್ದರಾಗಿದ್ದು , ಪಕ್ಷಾತೀತವಾಗಿ ಎಲ್ಲಾ ನಾಯಕರು ಬೆಂಬಲವನ್ನು ನೀಡಿದ್ದು, ಆದಷ್ಟು ಬೇಗ ಜಾರಿಗೊಳಿಸುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ನಮ್ಮ ರಾಜ್ಯದ ಪರಿಶಿಷ್ಟಜಾತಿಯಲ್ಲಿ ಸುಮಾರು 101 ಉಪ ಜಾತಿಗಳಿದ್ದು, ಆಂದ್ರಪ್ರದೇಶದಲ್ಲಿ ಎಸ್ಸಿ ಸಮುದಾಯದಲ್ಲಿ 57 ಉಪ ಜಾತಿಗಳಿವೆ. ಈ ಎಲ್ಲಾ ಉಪ ಜಾತಿಗಳಿಗೂ ಕಾನೂನಿನ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ ಎಂದರು.

ಯಾವ ಜಾತಿಯವರಿಗೂ ತೊಂದರೆಯಾಗದಂತೆ ಎಲ್ಲಾರಿಗೂ ಸಮ ಪಾಲು ಸಮಬಾಳು ಎಂಬ ವಾಕ್ಯದಂತೆ ನಾವು ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡುತ್ತದೆ ಎಂದರು.

ಒಳಮೀಸಲಾತಿ ಕುರಿತು ಮೊದಲ ಮೂರು ಸಚಿವ ಸಂಪುಟದ ಸಭೆಯಲ್ಲಿಯೂ ಮಹದೇವಪ್ಪ ಇದರ ಜಾರಿಯ ಕುರಿತು ದ್ವನಿಗೂಡಿಸಿದ್ದಾರೆ ಎಂದು ಹೇಳಿದರು.

ಹಂತ ಹಂತವಾಗಿ ಕಾನೂನಿನ ತೊಡಕು ಆಗದಂತೆ ವರದಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಚರ್ಚಿಸಿ ಇದನ್ನು ಅನುಷ್ಠಾನ ಮಾಡಬೇಕಾಗುತ್ತದೆ ಎಂದರು.

ಈ ರೀತಿಯಾಗಿ ಹಂತ ಹಂತವಾಗಿ ಮಾಡಬೇಕಾಗುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ತಾವು ತಾಳ್ಮೆಯಿಂದ ಇರಬೇಕು. ನಮ್ಮ ಸರ್ಕಾರ ಶತಾಯ ಗತಾಯ ಜಾರಿಗೊಳಿಸಲು ಬದ್ದವಾಗಿದೆ. ಯಾವುದೇ ಹೋರಾಟಗಳ ಅಗತ್ಯವಿಲ್ಲಾ ತಾವು ಶಾಂತವಾಗಿರಿ ಎಂದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಮಾದಾರ ಚನ್ನಯ್ಯಸ್ವಾಮೀಜಿ, ಆನಂದಮುನಿ‌ ಸ್ವಾಮೀಜಿ, ಸಚಿವರಾದ ಮಹದೇವಪ್ಪ, ಆರ್.ಬಿ.ತಿಮ್ಮಪುರ,ಸತೀಶ್ ಜಾರಕಿಹೋಳಿ,ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್,ಅರವಿಂದ್ ಬೆಲ್ಲದ್, ಸಂಸದ ಗೋವಿಂದ ಕಾರಜೋಳ,ಎ.ನಾರಾಯಣಸ್ವಾಮಿ ಹಾಗೂ ಶಾಸಕರು,ಸಮುದಾಯದ ಮುಖಂಡರು, ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago