Categories: ರಾಜ್ಯ

ಒಳ ಮೀಸಲಾತಿಯನ್ನು ಅನುಷ್ಠಾನ ಮಾಡಿಯೇ ತೀರುತ್ತೇವೆ – ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಉಶಾ ಮೆಹ್ತಾ ವರದಿಯನ್ನು ಜಾರಿಗೊಳಿಸಲು ಯಾರು ಮುಂದಾಗಲಿಲ್ಲ. 2014 ರಿಂದ ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರವಿಲ್ಲದ ಕಾರಣ ಈ ಒಂದು ಮೀಸಲಾತಿಯ ಅನುಷ್ಠಾನ ವಾಗಲಿಲ್ಲ. ನೊಂದು ಬೆಂದ ಸಮುದಾಯ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಯಾಗಿಲ್ಲ. ಸರ್ಕಾರಿ ನೌಕರಿ ಇರಬಹುದು, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿಯೂ ಅಭಿವೃದ್ಧಿ ಕಾಣದ ಸಮುದಾಯವೆಂದರೆ ಅದು ಈ ಮಾದಿಗ ಸಮುದಾಯ. ನಮ್ಮ ಸರ್ಕಾರ ಈಗಾಗಲೇ ಹೈಕೋರ್ಟ್ ನ ನ್ಯಾಯಾಧೀಶ ನಾಗಮೋಹನ ದಾಸ್ ರವರ ನೇತೃತ್ವದಲ್ಲಿ ಏಕ ಸದಸ್ಯ ಪೀಠವನ್ನು ರಚಿಸಿ 3 ತಿಂಗಳಲ್ಲಿ ವರದಿಯನ್ನು ಪಡೆದು ಜಾರಿಗೊಳಿಸಲು ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹ ಈ ಒಳ ಮೀಸಲಾತಿ ಜಾರಿಗೊಳಿಸಲು ಬದ್ದರಾಗಿದ್ದು , ಪಕ್ಷಾತೀತವಾಗಿ ಎಲ್ಲಾ ನಾಯಕರು ಬೆಂಬಲವನ್ನು ನೀಡಿದ್ದು, ಆದಷ್ಟು ಬೇಗ ಜಾರಿಗೊಳಿಸುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ನಮ್ಮ ರಾಜ್ಯದ ಪರಿಶಿಷ್ಟಜಾತಿಯಲ್ಲಿ ಸುಮಾರು 101 ಉಪ ಜಾತಿಗಳಿದ್ದು, ಆಂದ್ರಪ್ರದೇಶದಲ್ಲಿ ಎಸ್ಸಿ ಸಮುದಾಯದಲ್ಲಿ 57 ಉಪ ಜಾತಿಗಳಿವೆ. ಈ ಎಲ್ಲಾ ಉಪ ಜಾತಿಗಳಿಗೂ ಕಾನೂನಿನ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ ಎಂದರು.

ಯಾವ ಜಾತಿಯವರಿಗೂ ತೊಂದರೆಯಾಗದಂತೆ ಎಲ್ಲಾರಿಗೂ ಸಮ ಪಾಲು ಸಮಬಾಳು ಎಂಬ ವಾಕ್ಯದಂತೆ ನಾವು ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡುತ್ತದೆ ಎಂದರು.

ಒಳಮೀಸಲಾತಿ ಕುರಿತು ಮೊದಲ ಮೂರು ಸಚಿವ ಸಂಪುಟದ ಸಭೆಯಲ್ಲಿಯೂ ಮಹದೇವಪ್ಪ ಇದರ ಜಾರಿಯ ಕುರಿತು ದ್ವನಿಗೂಡಿಸಿದ್ದಾರೆ ಎಂದು ಹೇಳಿದರು.

ಹಂತ ಹಂತವಾಗಿ ಕಾನೂನಿನ ತೊಡಕು ಆಗದಂತೆ ವರದಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಚರ್ಚಿಸಿ ಇದನ್ನು ಅನುಷ್ಠಾನ ಮಾಡಬೇಕಾಗುತ್ತದೆ ಎಂದರು.

ಈ ರೀತಿಯಾಗಿ ಹಂತ ಹಂತವಾಗಿ ಮಾಡಬೇಕಾಗುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ತಾವು ತಾಳ್ಮೆಯಿಂದ ಇರಬೇಕು. ನಮ್ಮ ಸರ್ಕಾರ ಶತಾಯ ಗತಾಯ ಜಾರಿಗೊಳಿಸಲು ಬದ್ದವಾಗಿದೆ. ಯಾವುದೇ ಹೋರಾಟಗಳ ಅಗತ್ಯವಿಲ್ಲಾ ತಾವು ಶಾಂತವಾಗಿರಿ ಎಂದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಮಾದಾರ ಚನ್ನಯ್ಯಸ್ವಾಮೀಜಿ, ಆನಂದಮುನಿ‌ ಸ್ವಾಮೀಜಿ, ಸಚಿವರಾದ ಮಹದೇವಪ್ಪ, ಆರ್.ಬಿ.ತಿಮ್ಮಪುರ,ಸತೀಶ್ ಜಾರಕಿಹೋಳಿ,ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್,ಅರವಿಂದ್ ಬೆಲ್ಲದ್, ಸಂಸದ ಗೋವಿಂದ ಕಾರಜೋಳ,ಎ.ನಾರಾಯಣಸ್ವಾಮಿ ಹಾಗೂ ಶಾಸಕರು,ಸಮುದಾಯದ ಮುಖಂಡರು, ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

2 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

20 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

21 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

21 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

21 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

24 hours ago