Categories: ರಾಜ್ಯ

ಒಳ ಮೀಸಲಾತಿಯನ್ನು ಅನುಷ್ಠಾನ ಮಾಡಿಯೇ ತೀರುತ್ತೇವೆ – ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಉಶಾ ಮೆಹ್ತಾ ವರದಿಯನ್ನು ಜಾರಿಗೊಳಿಸಲು ಯಾರು ಮುಂದಾಗಲಿಲ್ಲ. 2014 ರಿಂದ ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರವಿಲ್ಲದ ಕಾರಣ ಈ ಒಂದು ಮೀಸಲಾತಿಯ ಅನುಷ್ಠಾನ ವಾಗಲಿಲ್ಲ. ನೊಂದು ಬೆಂದ ಸಮುದಾಯ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಯಾಗಿಲ್ಲ. ಸರ್ಕಾರಿ ನೌಕರಿ ಇರಬಹುದು, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿಯೂ ಅಭಿವೃದ್ಧಿ ಕಾಣದ ಸಮುದಾಯವೆಂದರೆ ಅದು ಈ ಮಾದಿಗ ಸಮುದಾಯ. ನಮ್ಮ ಸರ್ಕಾರ ಈಗಾಗಲೇ ಹೈಕೋರ್ಟ್ ನ ನ್ಯಾಯಾಧೀಶ ನಾಗಮೋಹನ ದಾಸ್ ರವರ ನೇತೃತ್ವದಲ್ಲಿ ಏಕ ಸದಸ್ಯ ಪೀಠವನ್ನು ರಚಿಸಿ 3 ತಿಂಗಳಲ್ಲಿ ವರದಿಯನ್ನು ಪಡೆದು ಜಾರಿಗೊಳಿಸಲು ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹ ಈ ಒಳ ಮೀಸಲಾತಿ ಜಾರಿಗೊಳಿಸಲು ಬದ್ದರಾಗಿದ್ದು , ಪಕ್ಷಾತೀತವಾಗಿ ಎಲ್ಲಾ ನಾಯಕರು ಬೆಂಬಲವನ್ನು ನೀಡಿದ್ದು, ಆದಷ್ಟು ಬೇಗ ಜಾರಿಗೊಳಿಸುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ನಮ್ಮ ರಾಜ್ಯದ ಪರಿಶಿಷ್ಟಜಾತಿಯಲ್ಲಿ ಸುಮಾರು 101 ಉಪ ಜಾತಿಗಳಿದ್ದು, ಆಂದ್ರಪ್ರದೇಶದಲ್ಲಿ ಎಸ್ಸಿ ಸಮುದಾಯದಲ್ಲಿ 57 ಉಪ ಜಾತಿಗಳಿವೆ. ಈ ಎಲ್ಲಾ ಉಪ ಜಾತಿಗಳಿಗೂ ಕಾನೂನಿನ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ ಎಂದರು.

ಯಾವ ಜಾತಿಯವರಿಗೂ ತೊಂದರೆಯಾಗದಂತೆ ಎಲ್ಲಾರಿಗೂ ಸಮ ಪಾಲು ಸಮಬಾಳು ಎಂಬ ವಾಕ್ಯದಂತೆ ನಾವು ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡುತ್ತದೆ ಎಂದರು.

ಒಳಮೀಸಲಾತಿ ಕುರಿತು ಮೊದಲ ಮೂರು ಸಚಿವ ಸಂಪುಟದ ಸಭೆಯಲ್ಲಿಯೂ ಮಹದೇವಪ್ಪ ಇದರ ಜಾರಿಯ ಕುರಿತು ದ್ವನಿಗೂಡಿಸಿದ್ದಾರೆ ಎಂದು ಹೇಳಿದರು.

ಹಂತ ಹಂತವಾಗಿ ಕಾನೂನಿನ ತೊಡಕು ಆಗದಂತೆ ವರದಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಚರ್ಚಿಸಿ ಇದನ್ನು ಅನುಷ್ಠಾನ ಮಾಡಬೇಕಾಗುತ್ತದೆ ಎಂದರು.

ಈ ರೀತಿಯಾಗಿ ಹಂತ ಹಂತವಾಗಿ ಮಾಡಬೇಕಾಗುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ತಾವು ತಾಳ್ಮೆಯಿಂದ ಇರಬೇಕು. ನಮ್ಮ ಸರ್ಕಾರ ಶತಾಯ ಗತಾಯ ಜಾರಿಗೊಳಿಸಲು ಬದ್ದವಾಗಿದೆ. ಯಾವುದೇ ಹೋರಾಟಗಳ ಅಗತ್ಯವಿಲ್ಲಾ ತಾವು ಶಾಂತವಾಗಿರಿ ಎಂದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಮಾದಾರ ಚನ್ನಯ್ಯಸ್ವಾಮೀಜಿ, ಆನಂದಮುನಿ‌ ಸ್ವಾಮೀಜಿ, ಸಚಿವರಾದ ಮಹದೇವಪ್ಪ, ಆರ್.ಬಿ.ತಿಮ್ಮಪುರ,ಸತೀಶ್ ಜಾರಕಿಹೋಳಿ,ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್,ಅರವಿಂದ್ ಬೆಲ್ಲದ್, ಸಂಸದ ಗೋವಿಂದ ಕಾರಜೋಳ,ಎ.ನಾರಾಯಣಸ್ವಾಮಿ ಹಾಗೂ ಶಾಸಕರು,ಸಮುದಾಯದ ಮುಖಂಡರು, ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago