ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡಬಾರದು- ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿ ಜಾರಿ ಮಾಡಬೇಕು- ವಕೀಲ ಎಚ್.ವೆಂಕಟೇಶ್ ದೊಡ್ಡೇರಿ ಆಗ್ರಹ

ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡದೆ, ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನ ಜಾರಿ ಮಾಡಬೇಕು, ವರದಿಯನ್ನ ಬಿಡುಗಡೆ ಮಾಡಲು ಅವಶ್ಯಕತೆ ಇಲ್ಲದಿದ್ದಲ್ಲಿ, ತುರ್ತು ಮಧ್ಯಂತರ ವರದಿಯನನ್ನ ಜಾರಿ ಮಾಡಬೇಕು ಎಂದು ಮಾದಿಗ ಸಮುದಾಯದ ಮುಖಂಡ ಎಚ್.ವೆಂಕಟೇಶ್ ದೊಡ್ಡೇರಿ ಸರ್ಕಾರವನ್ನ ಆಗ್ರಹಸಿದರು.

ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯ ಸಂಘಟನೆಗಳ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‌ ತಮಿಳುನಾಡು ಮಾದರಿಯಲ್ಲಿ ಶೈಕ್ಷಣಿಕರವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಶೇ.6ರಷ್ಟು ಮೀಸಲಾತಿ ಜಾರಿ ಮಾಡಬೇಕೆಂದು ಆಗ್ರಹಸಿದರು.

ನನ್ನ ಪ್ರಕಾರ ಒಳ ಮೀಸಲಾತಿ ಜಾರಿಯಾದರೆ, ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಜಾತಿಗಳಿಗೂ ಸಮನಾಗಿ ಹಂಚಿಕೆಯಾಗುವುದು. 2004ರಲ್ಲಿ ತಮಿಳುನಾಡಿನಲ್ಲಿ ಅತ್ಯಂತ ಹಿಂದುಳಿದ ಆರುಂಧತಿಯಾರ್ ಸಮುದಾಯಕ್ಕೆ ಶೇಕಡಾ 3 ರಷ್ಟು ಮೀಸಲಾತಿಯನ್ನ ನೀಡಲಾಗಿದೆ. ಹಾಗೆಯೇ ಕರ್ನಾಟಕ ಮಾದಿಗ ಸಮುದಾಯಕ್ಕೆ 6 ರಷ್ಟು ಮೀಸಲಾತಿ ನೀಡಿ, ಆನಂತರ ದತ್ತಾಂಶಗಳನ್ನ ತೆಗೆದು ತಿರ್ಮಾನ ಮಾಡುವಂತೆ ಹೇಳಿದರು.

ಇತಿಹಾಸವನ್ನು ನೋಡಿದಾಗ ಸರ್ಕಾರಗಳು ವ್ಯವಸ್ಥಿತವಾಗಿ ಒಳ ಮೀಸಲಾತಿಯನ್ನ ತುಳಿಯುತ್ತಲೇ ಬಂದಿದೆ. ಮಾದಿಗ ಸಮುದಾಯಕ್ಕೆ ಶೇ.6 ರಷ್ಟು ಮೀಸಲಾತಿ ಕೊಡುವಂತೆ ನಾವೆಲ್ಲಾ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡದೆ, ಕಣ್ಣೋರಿಸುವ ಕೆಲಸ ಮಾಡದೆ, ನ್ಯಾ, ನಾಗಮೋಹನ ದಾಸ್ ಆಯೋಗಕ್ಕೆ ನೀಡಿದ ಅವಧಿ ವಿಸ್ತರಣೆ ಮಾಡದೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ರಾಮಕೃಷ್ಣಪ್ಪ ದೊಡ್ಡತುಮಕೂರು ಮಾತನಾಡಿ, ರಾಜ್ಯದ 31 ಜಿಲ್ಲೆಗಳಲ್ಲಿನ 13 ಜಿಲ್ಲೆಗಳಲ್ಲಿ ಆದಿಕರ್ನಾಟಕ ಮತ್ತು ಆದಿದ್ರಾವಿಡ ಜಾತಿಗಳ ಬಗ್ಗೆ ಗೊಂದಲವಿದೆ. ಈ ಗೊಂದಲ ಪರಿಹಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಯಾವುದೇ ಸಬೂಬು ಹೇಳದೆ ಒಳ ಮೀಸಲಾತಿ ಜಾರಿ ಮಾಡಬೇಕು. ನಾವು ಯಾರ ಪಾಲನ್ನು ಕೇಳುತ್ತಿಲ್ಲ, ನಮ್ಮ ಪಾಲಿನ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.

ಈ ವೇಳೆ ಮಾದಿಗ ಸಮುದಾಯದ ಮುಖಂಡರಾದ ವೆಂಕಟೇಶ್ ದೊಡ್ಡತುಮಕೂರು, ಹನುಮಂತಯ್ಯ ಹಳೇಕೋಟೆ, ತಳವಾರ ನಾಗರಾಜು, ಹರ್ಷ ಹಾದ್ರೀಪುರ, ವಕೀಲರಾದ ಕಾಂತರಾಜು, ತೂಬಗೆರೆ ವೆಂಕಟೇಶ್, ಮಂಜುನಾಥ್, ಆರ್.ವಿ.ಶಿವಕುಮಾರ್, ನಾರಸಿಂಹನಹಳ್ಳಿ ಗಂಗರಾಜು, ಕುಂಬಾರಪೇಟೆ ನಾರಾಯಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

9 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

10 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

11 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

13 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

20 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

20 hours ago