ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡಬಾರದು- ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿ ಜಾರಿ ಮಾಡಬೇಕು- ವಕೀಲ ಎಚ್.ವೆಂಕಟೇಶ್ ದೊಡ್ಡೇರಿ ಆಗ್ರಹ

ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡದೆ, ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನ ಜಾರಿ ಮಾಡಬೇಕು, ವರದಿಯನ್ನ ಬಿಡುಗಡೆ ಮಾಡಲು ಅವಶ್ಯಕತೆ ಇಲ್ಲದಿದ್ದಲ್ಲಿ, ತುರ್ತು ಮಧ್ಯಂತರ ವರದಿಯನನ್ನ ಜಾರಿ ಮಾಡಬೇಕು ಎಂದು ಮಾದಿಗ ಸಮುದಾಯದ ಮುಖಂಡ ಎಚ್.ವೆಂಕಟೇಶ್ ದೊಡ್ಡೇರಿ ಸರ್ಕಾರವನ್ನ ಆಗ್ರಹಸಿದರು.

ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯ ಸಂಘಟನೆಗಳ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‌ ತಮಿಳುನಾಡು ಮಾದರಿಯಲ್ಲಿ ಶೈಕ್ಷಣಿಕರವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಶೇ.6ರಷ್ಟು ಮೀಸಲಾತಿ ಜಾರಿ ಮಾಡಬೇಕೆಂದು ಆಗ್ರಹಸಿದರು.

ನನ್ನ ಪ್ರಕಾರ ಒಳ ಮೀಸಲಾತಿ ಜಾರಿಯಾದರೆ, ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಜಾತಿಗಳಿಗೂ ಸಮನಾಗಿ ಹಂಚಿಕೆಯಾಗುವುದು. 2004ರಲ್ಲಿ ತಮಿಳುನಾಡಿನಲ್ಲಿ ಅತ್ಯಂತ ಹಿಂದುಳಿದ ಆರುಂಧತಿಯಾರ್ ಸಮುದಾಯಕ್ಕೆ ಶೇಕಡಾ 3 ರಷ್ಟು ಮೀಸಲಾತಿಯನ್ನ ನೀಡಲಾಗಿದೆ. ಹಾಗೆಯೇ ಕರ್ನಾಟಕ ಮಾದಿಗ ಸಮುದಾಯಕ್ಕೆ 6 ರಷ್ಟು ಮೀಸಲಾತಿ ನೀಡಿ, ಆನಂತರ ದತ್ತಾಂಶಗಳನ್ನ ತೆಗೆದು ತಿರ್ಮಾನ ಮಾಡುವಂತೆ ಹೇಳಿದರು.

ಇತಿಹಾಸವನ್ನು ನೋಡಿದಾಗ ಸರ್ಕಾರಗಳು ವ್ಯವಸ್ಥಿತವಾಗಿ ಒಳ ಮೀಸಲಾತಿಯನ್ನ ತುಳಿಯುತ್ತಲೇ ಬಂದಿದೆ. ಮಾದಿಗ ಸಮುದಾಯಕ್ಕೆ ಶೇ.6 ರಷ್ಟು ಮೀಸಲಾತಿ ಕೊಡುವಂತೆ ನಾವೆಲ್ಲಾ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡದೆ, ಕಣ್ಣೋರಿಸುವ ಕೆಲಸ ಮಾಡದೆ, ನ್ಯಾ, ನಾಗಮೋಹನ ದಾಸ್ ಆಯೋಗಕ್ಕೆ ನೀಡಿದ ಅವಧಿ ವಿಸ್ತರಣೆ ಮಾಡದೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ರಾಮಕೃಷ್ಣಪ್ಪ ದೊಡ್ಡತುಮಕೂರು ಮಾತನಾಡಿ, ರಾಜ್ಯದ 31 ಜಿಲ್ಲೆಗಳಲ್ಲಿನ 13 ಜಿಲ್ಲೆಗಳಲ್ಲಿ ಆದಿಕರ್ನಾಟಕ ಮತ್ತು ಆದಿದ್ರಾವಿಡ ಜಾತಿಗಳ ಬಗ್ಗೆ ಗೊಂದಲವಿದೆ. ಈ ಗೊಂದಲ ಪರಿಹಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಯಾವುದೇ ಸಬೂಬು ಹೇಳದೆ ಒಳ ಮೀಸಲಾತಿ ಜಾರಿ ಮಾಡಬೇಕು. ನಾವು ಯಾರ ಪಾಲನ್ನು ಕೇಳುತ್ತಿಲ್ಲ, ನಮ್ಮ ಪಾಲಿನ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.

ಈ ವೇಳೆ ಮಾದಿಗ ಸಮುದಾಯದ ಮುಖಂಡರಾದ ವೆಂಕಟೇಶ್ ದೊಡ್ಡತುಮಕೂರು, ಹನುಮಂತಯ್ಯ ಹಳೇಕೋಟೆ, ತಳವಾರ ನಾಗರಾಜು, ಹರ್ಷ ಹಾದ್ರೀಪುರ, ವಕೀಲರಾದ ಕಾಂತರಾಜು, ತೂಬಗೆರೆ ವೆಂಕಟೇಶ್, ಮಂಜುನಾಥ್, ಆರ್.ವಿ.ಶಿವಕುಮಾರ್, ನಾರಸಿಂಹನಹಳ್ಳಿ ಗಂಗರಾಜು, ಕುಂಬಾರಪೇಟೆ ನಾರಾಯಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

3 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

3 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

4 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

6 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

7 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

14 hours ago