ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡದೆ, ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನ ಜಾರಿ ಮಾಡಬೇಕು, ವರದಿಯನ್ನ ಬಿಡುಗಡೆ ಮಾಡಲು ಅವಶ್ಯಕತೆ ಇಲ್ಲದಿದ್ದಲ್ಲಿ, ತುರ್ತು ಮಧ್ಯಂತರ ವರದಿಯನನ್ನ ಜಾರಿ ಮಾಡಬೇಕು ಎಂದು ಮಾದಿಗ ಸಮುದಾಯದ ಮುಖಂಡ ಎಚ್.ವೆಂಕಟೇಶ್ ದೊಡ್ಡೇರಿ ಸರ್ಕಾರವನ್ನ ಆಗ್ರಹಸಿದರು.
ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯ ಸಂಘಟನೆಗಳ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಮಾದರಿಯಲ್ಲಿ ಶೈಕ್ಷಣಿಕರವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಶೇ.6ರಷ್ಟು ಮೀಸಲಾತಿ ಜಾರಿ ಮಾಡಬೇಕೆಂದು ಆಗ್ರಹಸಿದರು.
ನನ್ನ ಪ್ರಕಾರ ಒಳ ಮೀಸಲಾತಿ ಜಾರಿಯಾದರೆ, ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಜಾತಿಗಳಿಗೂ ಸಮನಾಗಿ ಹಂಚಿಕೆಯಾಗುವುದು. 2004ರಲ್ಲಿ ತಮಿಳುನಾಡಿನಲ್ಲಿ ಅತ್ಯಂತ ಹಿಂದುಳಿದ ಆರುಂಧತಿಯಾರ್ ಸಮುದಾಯಕ್ಕೆ ಶೇಕಡಾ 3 ರಷ್ಟು ಮೀಸಲಾತಿಯನ್ನ ನೀಡಲಾಗಿದೆ. ಹಾಗೆಯೇ ಕರ್ನಾಟಕ ಮಾದಿಗ ಸಮುದಾಯಕ್ಕೆ 6 ರಷ್ಟು ಮೀಸಲಾತಿ ನೀಡಿ, ಆನಂತರ ದತ್ತಾಂಶಗಳನ್ನ ತೆಗೆದು ತಿರ್ಮಾನ ಮಾಡುವಂತೆ ಹೇಳಿದರು.
ಇತಿಹಾಸವನ್ನು ನೋಡಿದಾಗ ಸರ್ಕಾರಗಳು ವ್ಯವಸ್ಥಿತವಾಗಿ ಒಳ ಮೀಸಲಾತಿಯನ್ನ ತುಳಿಯುತ್ತಲೇ ಬಂದಿದೆ. ಮಾದಿಗ ಸಮುದಾಯಕ್ಕೆ ಶೇ.6 ರಷ್ಟು ಮೀಸಲಾತಿ ಕೊಡುವಂತೆ ನಾವೆಲ್ಲಾ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡದೆ, ಕಣ್ಣೋರಿಸುವ ಕೆಲಸ ಮಾಡದೆ, ನ್ಯಾ, ನಾಗಮೋಹನ ದಾಸ್ ಆಯೋಗಕ್ಕೆ ನೀಡಿದ ಅವಧಿ ವಿಸ್ತರಣೆ ಮಾಡದೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ರಾಮಕೃಷ್ಣಪ್ಪ ದೊಡ್ಡತುಮಕೂರು ಮಾತನಾಡಿ, ರಾಜ್ಯದ 31 ಜಿಲ್ಲೆಗಳಲ್ಲಿನ 13 ಜಿಲ್ಲೆಗಳಲ್ಲಿ ಆದಿಕರ್ನಾಟಕ ಮತ್ತು ಆದಿದ್ರಾವಿಡ ಜಾತಿಗಳ ಬಗ್ಗೆ ಗೊಂದಲವಿದೆ. ಈ ಗೊಂದಲ ಪರಿಹಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಯಾವುದೇ ಸಬೂಬು ಹೇಳದೆ ಒಳ ಮೀಸಲಾತಿ ಜಾರಿ ಮಾಡಬೇಕು. ನಾವು ಯಾರ ಪಾಲನ್ನು ಕೇಳುತ್ತಿಲ್ಲ, ನಮ್ಮ ಪಾಲಿನ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.
ಈ ವೇಳೆ ಮಾದಿಗ ಸಮುದಾಯದ ಮುಖಂಡರಾದ ವೆಂಕಟೇಶ್ ದೊಡ್ಡತುಮಕೂರು, ಹನುಮಂತಯ್ಯ ಹಳೇಕೋಟೆ, ತಳವಾರ ನಾಗರಾಜು, ಹರ್ಷ ಹಾದ್ರೀಪುರ, ವಕೀಲರಾದ ಕಾಂತರಾಜು, ತೂಬಗೆರೆ ವೆಂಕಟೇಶ್, ಮಂಜುನಾಥ್, ಆರ್.ವಿ.ಶಿವಕುಮಾರ್, ನಾರಸಿಂಹನಹಳ್ಳಿ ಗಂಗರಾಜು, ಕುಂಬಾರಪೇಟೆ ನಾರಾಯಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…