ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡಬಾರದು- ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿ ಜಾರಿ ಮಾಡಬೇಕು- ವಕೀಲ ಎಚ್.ವೆಂಕಟೇಶ್ ದೊಡ್ಡೇರಿ ಆಗ್ರಹ

ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡದೆ, ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನ ಜಾರಿ ಮಾಡಬೇಕು, ವರದಿಯನ್ನ ಬಿಡುಗಡೆ ಮಾಡಲು ಅವಶ್ಯಕತೆ ಇಲ್ಲದಿದ್ದಲ್ಲಿ, ತುರ್ತು ಮಧ್ಯಂತರ ವರದಿಯನನ್ನ ಜಾರಿ ಮಾಡಬೇಕು ಎಂದು ಮಾದಿಗ ಸಮುದಾಯದ ಮುಖಂಡ ಎಚ್.ವೆಂಕಟೇಶ್ ದೊಡ್ಡೇರಿ ಸರ್ಕಾರವನ್ನ ಆಗ್ರಹಸಿದರು.

ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯ ಸಂಘಟನೆಗಳ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‌ ತಮಿಳುನಾಡು ಮಾದರಿಯಲ್ಲಿ ಶೈಕ್ಷಣಿಕರವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಶೇ.6ರಷ್ಟು ಮೀಸಲಾತಿ ಜಾರಿ ಮಾಡಬೇಕೆಂದು ಆಗ್ರಹಸಿದರು.

ನನ್ನ ಪ್ರಕಾರ ಒಳ ಮೀಸಲಾತಿ ಜಾರಿಯಾದರೆ, ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಜಾತಿಗಳಿಗೂ ಸಮನಾಗಿ ಹಂಚಿಕೆಯಾಗುವುದು. 2004ರಲ್ಲಿ ತಮಿಳುನಾಡಿನಲ್ಲಿ ಅತ್ಯಂತ ಹಿಂದುಳಿದ ಆರುಂಧತಿಯಾರ್ ಸಮುದಾಯಕ್ಕೆ ಶೇಕಡಾ 3 ರಷ್ಟು ಮೀಸಲಾತಿಯನ್ನ ನೀಡಲಾಗಿದೆ. ಹಾಗೆಯೇ ಕರ್ನಾಟಕ ಮಾದಿಗ ಸಮುದಾಯಕ್ಕೆ 6 ರಷ್ಟು ಮೀಸಲಾತಿ ನೀಡಿ, ಆನಂತರ ದತ್ತಾಂಶಗಳನ್ನ ತೆಗೆದು ತಿರ್ಮಾನ ಮಾಡುವಂತೆ ಹೇಳಿದರು.

ಇತಿಹಾಸವನ್ನು ನೋಡಿದಾಗ ಸರ್ಕಾರಗಳು ವ್ಯವಸ್ಥಿತವಾಗಿ ಒಳ ಮೀಸಲಾತಿಯನ್ನ ತುಳಿಯುತ್ತಲೇ ಬಂದಿದೆ. ಮಾದಿಗ ಸಮುದಾಯಕ್ಕೆ ಶೇ.6 ರಷ್ಟು ಮೀಸಲಾತಿ ಕೊಡುವಂತೆ ನಾವೆಲ್ಲಾ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡದೆ, ಕಣ್ಣೋರಿಸುವ ಕೆಲಸ ಮಾಡದೆ, ನ್ಯಾ, ನಾಗಮೋಹನ ದಾಸ್ ಆಯೋಗಕ್ಕೆ ನೀಡಿದ ಅವಧಿ ವಿಸ್ತರಣೆ ಮಾಡದೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ರಾಮಕೃಷ್ಣಪ್ಪ ದೊಡ್ಡತುಮಕೂರು ಮಾತನಾಡಿ, ರಾಜ್ಯದ 31 ಜಿಲ್ಲೆಗಳಲ್ಲಿನ 13 ಜಿಲ್ಲೆಗಳಲ್ಲಿ ಆದಿಕರ್ನಾಟಕ ಮತ್ತು ಆದಿದ್ರಾವಿಡ ಜಾತಿಗಳ ಬಗ್ಗೆ ಗೊಂದಲವಿದೆ. ಈ ಗೊಂದಲ ಪರಿಹಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಯಾವುದೇ ಸಬೂಬು ಹೇಳದೆ ಒಳ ಮೀಸಲಾತಿ ಜಾರಿ ಮಾಡಬೇಕು. ನಾವು ಯಾರ ಪಾಲನ್ನು ಕೇಳುತ್ತಿಲ್ಲ, ನಮ್ಮ ಪಾಲಿನ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.

ಈ ವೇಳೆ ಮಾದಿಗ ಸಮುದಾಯದ ಮುಖಂಡರಾದ ವೆಂಕಟೇಶ್ ದೊಡ್ಡತುಮಕೂರು, ಹನುಮಂತಯ್ಯ ಹಳೇಕೋಟೆ, ತಳವಾರ ನಾಗರಾಜು, ಹರ್ಷ ಹಾದ್ರೀಪುರ, ವಕೀಲರಾದ ಕಾಂತರಾಜು, ತೂಬಗೆರೆ ವೆಂಕಟೇಶ್, ಮಂಜುನಾಥ್, ಆರ್.ವಿ.ಶಿವಕುಮಾರ್, ನಾರಸಿಂಹನಹಳ್ಳಿ ಗಂಗರಾಜು, ಕುಂಬಾರಪೇಟೆ ನಾರಾಯಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

16 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

19 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

2 days ago