ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡದೆ, ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನ ಜಾರಿ ಮಾಡಬೇಕು, ವರದಿಯನ್ನ ಬಿಡುಗಡೆ ಮಾಡಲು ಅವಶ್ಯಕತೆ ಇಲ್ಲದಿದ್ದಲ್ಲಿ, ತುರ್ತು ಮಧ್ಯಂತರ ವರದಿಯನನ್ನ ಜಾರಿ ಮಾಡಬೇಕು ಎಂದು ಮಾದಿಗ ಸಮುದಾಯದ ಮುಖಂಡ ಎಚ್.ವೆಂಕಟೇಶ್ ದೊಡ್ಡೇರಿ ಸರ್ಕಾರವನ್ನ ಆಗ್ರಹಸಿದರು.
ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯ ಸಂಘಟನೆಗಳ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಮಾದರಿಯಲ್ಲಿ ಶೈಕ್ಷಣಿಕರವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಶೇ.6ರಷ್ಟು ಮೀಸಲಾತಿ ಜಾರಿ ಮಾಡಬೇಕೆಂದು ಆಗ್ರಹಸಿದರು.
ನನ್ನ ಪ್ರಕಾರ ಒಳ ಮೀಸಲಾತಿ ಜಾರಿಯಾದರೆ, ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಜಾತಿಗಳಿಗೂ ಸಮನಾಗಿ ಹಂಚಿಕೆಯಾಗುವುದು. 2004ರಲ್ಲಿ ತಮಿಳುನಾಡಿನಲ್ಲಿ ಅತ್ಯಂತ ಹಿಂದುಳಿದ ಆರುಂಧತಿಯಾರ್ ಸಮುದಾಯಕ್ಕೆ ಶೇಕಡಾ 3 ರಷ್ಟು ಮೀಸಲಾತಿಯನ್ನ ನೀಡಲಾಗಿದೆ. ಹಾಗೆಯೇ ಕರ್ನಾಟಕ ಮಾದಿಗ ಸಮುದಾಯಕ್ಕೆ 6 ರಷ್ಟು ಮೀಸಲಾತಿ ನೀಡಿ, ಆನಂತರ ದತ್ತಾಂಶಗಳನ್ನ ತೆಗೆದು ತಿರ್ಮಾನ ಮಾಡುವಂತೆ ಹೇಳಿದರು.
ಇತಿಹಾಸವನ್ನು ನೋಡಿದಾಗ ಸರ್ಕಾರಗಳು ವ್ಯವಸ್ಥಿತವಾಗಿ ಒಳ ಮೀಸಲಾತಿಯನ್ನ ತುಳಿಯುತ್ತಲೇ ಬಂದಿದೆ. ಮಾದಿಗ ಸಮುದಾಯಕ್ಕೆ ಶೇ.6 ರಷ್ಟು ಮೀಸಲಾತಿ ಕೊಡುವಂತೆ ನಾವೆಲ್ಲಾ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡದೆ, ಕಣ್ಣೋರಿಸುವ ಕೆಲಸ ಮಾಡದೆ, ನ್ಯಾ, ನಾಗಮೋಹನ ದಾಸ್ ಆಯೋಗಕ್ಕೆ ನೀಡಿದ ಅವಧಿ ವಿಸ್ತರಣೆ ಮಾಡದೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ರಾಮಕೃಷ್ಣಪ್ಪ ದೊಡ್ಡತುಮಕೂರು ಮಾತನಾಡಿ, ರಾಜ್ಯದ 31 ಜಿಲ್ಲೆಗಳಲ್ಲಿನ 13 ಜಿಲ್ಲೆಗಳಲ್ಲಿ ಆದಿಕರ್ನಾಟಕ ಮತ್ತು ಆದಿದ್ರಾವಿಡ ಜಾತಿಗಳ ಬಗ್ಗೆ ಗೊಂದಲವಿದೆ. ಈ ಗೊಂದಲ ಪರಿಹಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಯಾವುದೇ ಸಬೂಬು ಹೇಳದೆ ಒಳ ಮೀಸಲಾತಿ ಜಾರಿ ಮಾಡಬೇಕು. ನಾವು ಯಾರ ಪಾಲನ್ನು ಕೇಳುತ್ತಿಲ್ಲ, ನಮ್ಮ ಪಾಲಿನ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.
ಈ ವೇಳೆ ಮಾದಿಗ ಸಮುದಾಯದ ಮುಖಂಡರಾದ ವೆಂಕಟೇಶ್ ದೊಡ್ಡತುಮಕೂರು, ಹನುಮಂತಯ್ಯ ಹಳೇಕೋಟೆ, ತಳವಾರ ನಾಗರಾಜು, ಹರ್ಷ ಹಾದ್ರೀಪುರ, ವಕೀಲರಾದ ಕಾಂತರಾಜು, ತೂಬಗೆರೆ ವೆಂಕಟೇಶ್, ಮಂಜುನಾಥ್, ಆರ್.ವಿ.ಶಿವಕುಮಾರ್, ನಾರಸಿಂಹನಹಳ್ಳಿ ಗಂಗರಾಜು, ಕುಂಬಾರಪೇಟೆ ನಾರಾಯಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…