ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡದೆ, ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನ ಜಾರಿ ಮಾಡಬೇಕು, ವರದಿಯನ್ನ ಬಿಡುಗಡೆ ಮಾಡಲು ಅವಶ್ಯಕತೆ ಇಲ್ಲದಿದ್ದಲ್ಲಿ, ತುರ್ತು ಮಧ್ಯಂತರ ವರದಿಯನನ್ನ ಜಾರಿ ಮಾಡಬೇಕು ಎಂದು ಮಾದಿಗ ಸಮುದಾಯದ ಮುಖಂಡ ಎಚ್.ವೆಂಕಟೇಶ್ ದೊಡ್ಡೇರಿ ಸರ್ಕಾರವನ್ನ ಆಗ್ರಹಸಿದರು.
ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯ ಸಂಘಟನೆಗಳ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಮಾದರಿಯಲ್ಲಿ ಶೈಕ್ಷಣಿಕರವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಶೇ.6ರಷ್ಟು ಮೀಸಲಾತಿ ಜಾರಿ ಮಾಡಬೇಕೆಂದು ಆಗ್ರಹಸಿದರು.
ನನ್ನ ಪ್ರಕಾರ ಒಳ ಮೀಸಲಾತಿ ಜಾರಿಯಾದರೆ, ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಜಾತಿಗಳಿಗೂ ಸಮನಾಗಿ ಹಂಚಿಕೆಯಾಗುವುದು. 2004ರಲ್ಲಿ ತಮಿಳುನಾಡಿನಲ್ಲಿ ಅತ್ಯಂತ ಹಿಂದುಳಿದ ಆರುಂಧತಿಯಾರ್ ಸಮುದಾಯಕ್ಕೆ ಶೇಕಡಾ 3 ರಷ್ಟು ಮೀಸಲಾತಿಯನ್ನ ನೀಡಲಾಗಿದೆ. ಹಾಗೆಯೇ ಕರ್ನಾಟಕ ಮಾದಿಗ ಸಮುದಾಯಕ್ಕೆ 6 ರಷ್ಟು ಮೀಸಲಾತಿ ನೀಡಿ, ಆನಂತರ ದತ್ತಾಂಶಗಳನ್ನ ತೆಗೆದು ತಿರ್ಮಾನ ಮಾಡುವಂತೆ ಹೇಳಿದರು.
ಇತಿಹಾಸವನ್ನು ನೋಡಿದಾಗ ಸರ್ಕಾರಗಳು ವ್ಯವಸ್ಥಿತವಾಗಿ ಒಳ ಮೀಸಲಾತಿಯನ್ನ ತುಳಿಯುತ್ತಲೇ ಬಂದಿದೆ. ಮಾದಿಗ ಸಮುದಾಯಕ್ಕೆ ಶೇ.6 ರಷ್ಟು ಮೀಸಲಾತಿ ಕೊಡುವಂತೆ ನಾವೆಲ್ಲಾ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡದೆ, ಕಣ್ಣೋರಿಸುವ ಕೆಲಸ ಮಾಡದೆ, ನ್ಯಾ, ನಾಗಮೋಹನ ದಾಸ್ ಆಯೋಗಕ್ಕೆ ನೀಡಿದ ಅವಧಿ ವಿಸ್ತರಣೆ ಮಾಡದೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ರಾಮಕೃಷ್ಣಪ್ಪ ದೊಡ್ಡತುಮಕೂರು ಮಾತನಾಡಿ, ರಾಜ್ಯದ 31 ಜಿಲ್ಲೆಗಳಲ್ಲಿನ 13 ಜಿಲ್ಲೆಗಳಲ್ಲಿ ಆದಿಕರ್ನಾಟಕ ಮತ್ತು ಆದಿದ್ರಾವಿಡ ಜಾತಿಗಳ ಬಗ್ಗೆ ಗೊಂದಲವಿದೆ. ಈ ಗೊಂದಲ ಪರಿಹಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಯಾವುದೇ ಸಬೂಬು ಹೇಳದೆ ಒಳ ಮೀಸಲಾತಿ ಜಾರಿ ಮಾಡಬೇಕು. ನಾವು ಯಾರ ಪಾಲನ್ನು ಕೇಳುತ್ತಿಲ್ಲ, ನಮ್ಮ ಪಾಲಿನ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.
ಈ ವೇಳೆ ಮಾದಿಗ ಸಮುದಾಯದ ಮುಖಂಡರಾದ ವೆಂಕಟೇಶ್ ದೊಡ್ಡತುಮಕೂರು, ಹನುಮಂತಯ್ಯ ಹಳೇಕೋಟೆ, ತಳವಾರ ನಾಗರಾಜು, ಹರ್ಷ ಹಾದ್ರೀಪುರ, ವಕೀಲರಾದ ಕಾಂತರಾಜು, ತೂಬಗೆರೆ ವೆಂಕಟೇಶ್, ಮಂಜುನಾಥ್, ಆರ್.ವಿ.ಶಿವಕುಮಾರ್, ನಾರಸಿಂಹನಹಳ್ಳಿ ಗಂಗರಾಜು, ಕುಂಬಾರಪೇಟೆ ನಾರಾಯಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…