Categories: ಕೋಲಾರ

ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಮನೆ-ಮನೆಗೆ ಅಯೋಧ್ಯೆಯ ಮಂತ್ರಾಕ್ಷತೆ ವಿತರಣೆ

ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊರವಲಯದ ಎನ್.ಜಿ.ಒ ಲೇಔಟ್ ನಲ್ಲಿ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ಅಯೋಧ್ಯೆಯ ಮಂತ್ರಾಕ್ಷತೆ ಹಾಗೂ ರಾಮನ ಭಾವಚಿತ್ರ ವಿತರಿಸಿ ರಾಮನ ಭಕ್ತಿಭಾವವನ್ನು ಮೆರೆದರು.

ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಮಾತನಾಡಿ ಭಾರತ ದೇಶದ 500 ವರ್ಷಗಳ ಕೋಟ್ಯಂತರ ಹಿಂದೂಗಳ ಕನಸನ್ನು ಇದೇ ತಿಂಗಳು 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ನರೇಂದ್ರ ಮೋದಿ ನಾಯಕತ್ವದಲ್ಲಿ ನನಸು ಮಾಡಲಿದ್ದಾರೆ ಇಡೀ ದೇಶ ಸಂತೋಷ ಪಡುವ ವಿಷಯವಾಗಿದೆ. ಯಾವುದೇ ರಾಜಕೀಯ ರಹಿತವಾಗಿ ಪಕ್ಷಬೇಧ ಮರೆತು ಭಾರತೀಯರಾದವರು ಸಂಭ್ರಮಪಡುತ್ತಾ ಇದ್ದಾರೆ ಆ ದಿನ ಪ್ರತಿ ಮನೆಯಲ್ಲಿ ದೀಪಗಳನ್ನು ಉರಿಸಿ, ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಮಾಡಬೇಕು. ದೀಪಾವಳಿ ಮಾದರಿಯಲ್ಲಿ ಹಬ್ಬವನ್ನು ಆಚರಿಸಿ ಸಂಭ್ರಮಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಮಭಕ್ತರಾದ ನಟರಾಜ್, ಮುರಳಿ, ನಾಗರಾಜ್, ಗಣೇಶ್, ಸುರೇಶ್, ಗೋವಿಂದ ಸ್ವಾಮಿ, ಮುಂತಾದವರು ಇದ್ದರು

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

7 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

8 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

19 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago