Categories: ಕೋಲಾರ

ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಮನೆ-ಮನೆಗೆ ಅಯೋಧ್ಯೆಯ ಮಂತ್ರಾಕ್ಷತೆ ವಿತರಣೆ

ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊರವಲಯದ ಎನ್.ಜಿ.ಒ ಲೇಔಟ್ ನಲ್ಲಿ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ಅಯೋಧ್ಯೆಯ ಮಂತ್ರಾಕ್ಷತೆ ಹಾಗೂ ರಾಮನ ಭಾವಚಿತ್ರ ವಿತರಿಸಿ ರಾಮನ ಭಕ್ತಿಭಾವವನ್ನು ಮೆರೆದರು.

ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಮಾತನಾಡಿ ಭಾರತ ದೇಶದ 500 ವರ್ಷಗಳ ಕೋಟ್ಯಂತರ ಹಿಂದೂಗಳ ಕನಸನ್ನು ಇದೇ ತಿಂಗಳು 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ನರೇಂದ್ರ ಮೋದಿ ನಾಯಕತ್ವದಲ್ಲಿ ನನಸು ಮಾಡಲಿದ್ದಾರೆ ಇಡೀ ದೇಶ ಸಂತೋಷ ಪಡುವ ವಿಷಯವಾಗಿದೆ. ಯಾವುದೇ ರಾಜಕೀಯ ರಹಿತವಾಗಿ ಪಕ್ಷಬೇಧ ಮರೆತು ಭಾರತೀಯರಾದವರು ಸಂಭ್ರಮಪಡುತ್ತಾ ಇದ್ದಾರೆ ಆ ದಿನ ಪ್ರತಿ ಮನೆಯಲ್ಲಿ ದೀಪಗಳನ್ನು ಉರಿಸಿ, ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಮಾಡಬೇಕು. ದೀಪಾವಳಿ ಮಾದರಿಯಲ್ಲಿ ಹಬ್ಬವನ್ನು ಆಚರಿಸಿ ಸಂಭ್ರಮಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಮಭಕ್ತರಾದ ನಟರಾಜ್, ಮುರಳಿ, ನಾಗರಾಜ್, ಗಣೇಶ್, ಸುರೇಶ್, ಗೋವಿಂದ ಸ್ವಾಮಿ, ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

7 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago