Categories: ಕೋಲಾರ

ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಡೂಂಲೈಟ್ ವೃತ್ತದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ

ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದ ವಿವೇಕಾನಂದ ವೃತ್ತದಲ್ಲಿ (ಡೂಂಲೈಟ್) ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ವಿವೇಕಾನಂದ ಮಿತ್ರ ಬಳಗದ ವತಿಯಿಂದ ಶ್ರೀರಾಮನ ಭಾವಚಿತ್ರ ಅನಾವರಣಗೊಳಿಸಿ ವಿಶೇಷ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಶ್ರೀರಾಮರ 40 ಅಡಿ ಕಟೌಟ್ ನಿರ್ಮಿಸಲಾಗಿದ್ದು, ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಸಾದ, ಪಾನಕ, ಮಜ್ಜಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಂಜೆ ದೀಪೋತ್ಸವ ಹಾಗೂ ಪಟಾಕಿ ಶೋ ಅನ್ನು ವಿವೇಕಾನಂದ ಮಿತ್ರ ಬಳಗದ ವತಿಯಿಂದ ನಡೆಸಲಾಯಿತು.

ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಚಾಲಕ ಶಂಕರ್ ನಾಯಕ್, 500 ವರ್ಷಗಳ ನಂತರ ನಮಗೆ ಪುಣ್ಯದ ದಿನ ದೊರೆತಿದ್ದು, ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಶುಭ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಆ ರಾಮನು ಒಳ್ಳೆಯ ಸೌಭಾಗ್ಯವನ್ನು ಕರುಣಿಸಲಿ ಎಂದು ಆಶಿಸಿದರು.

ಕಾರ್ಯಕ್ರಮದ ಆಯೋಜಕ, ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಹೋರಾಟ, ಬಲಿದಾನದ ಪರಿಶ್ರಮದಿಂದಾಗಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಹಿಂದೂಗಳ ಪ್ರತೀಕ ರಾಮನ ದೇವಸ್ಥಾನದ ಪ್ರಾಣಪ್ರತಿಷ್ಠಾಪನೆಯು ನಮ್ಮ ಕಾಲಘಟ್ಟದಲ್ಲಿ ಆಗಿರುವುದು ಸುದೈವದ ಸಂಗತಿಯಾಗಿದೆ. ಪ್ರತಿ ಮನೆಯಲ್ಲಿಯೂ ದೀಪಾವಳಿ, ಯುಗಾದಿಯಂತೆ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರ್‌ಎಸ್‌ಎಸ್ ವಿಭಾಗ ಪ್ರಚಾರಕ ಪ್ರಶಾಂತ್, ಪ್ರಾಂತ್ಯ ಪ್ರಚಾರಕ ಸಿದ್ದಣ್ಣ, ನಗರಸಭೆ ಸದಸ್ಯರಾದ ರಾಕೇಶ್, ಮಂಜುನಾಥ್, ಟಿಲ್ಲಿ ಮಂಜುನಾಥ್, ಮುಖಂಡರಾದ ಸಾ.ಮಾ.ಬಾಬು, ನಾಮಲ್ ಮಂಜು, ಆಟೋ ರಮೇಶ್, ನಾಗೇಂದ್ರ, ಸತ್ಯನಾರಾಯಣ, ಮಧು, ಸಂಪರ್, ಸತೀಶ್, ಸಂದೀಪ್ ಮುಂತಾದವರು ಇದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago