ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದ ವಿವೇಕಾನಂದ ವೃತ್ತದಲ್ಲಿ (ಡೂಂಲೈಟ್) ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ವಿವೇಕಾನಂದ ಮಿತ್ರ ಬಳಗದ ವತಿಯಿಂದ ಶ್ರೀರಾಮನ ಭಾವಚಿತ್ರ ಅನಾವರಣಗೊಳಿಸಿ ವಿಶೇಷ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಶ್ರೀರಾಮರ 40 ಅಡಿ ಕಟೌಟ್ ನಿರ್ಮಿಸಲಾಗಿದ್ದು, ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಸಾದ, ಪಾನಕ, ಮಜ್ಜಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಂಜೆ ದೀಪೋತ್ಸವ ಹಾಗೂ ಪಟಾಕಿ ಶೋ ಅನ್ನು ವಿವೇಕಾನಂದ ಮಿತ್ರ ಬಳಗದ ವತಿಯಿಂದ ನಡೆಸಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಚಾಲಕ ಶಂಕರ್ ನಾಯಕ್, 500 ವರ್ಷಗಳ ನಂತರ ನಮಗೆ ಪುಣ್ಯದ ದಿನ ದೊರೆತಿದ್ದು, ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಶುಭ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಆ ರಾಮನು ಒಳ್ಳೆಯ ಸೌಭಾಗ್ಯವನ್ನು ಕರುಣಿಸಲಿ ಎಂದು ಆಶಿಸಿದರು.
ಕಾರ್ಯಕ್ರಮದ ಆಯೋಜಕ, ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಹೋರಾಟ, ಬಲಿದಾನದ ಪರಿಶ್ರಮದಿಂದಾಗಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಹಿಂದೂಗಳ ಪ್ರತೀಕ ರಾಮನ ದೇವಸ್ಥಾನದ ಪ್ರಾಣಪ್ರತಿಷ್ಠಾಪನೆಯು ನಮ್ಮ ಕಾಲಘಟ್ಟದಲ್ಲಿ ಆಗಿರುವುದು ಸುದೈವದ ಸಂಗತಿಯಾಗಿದೆ. ಪ್ರತಿ ಮನೆಯಲ್ಲಿಯೂ ದೀಪಾವಳಿ, ಯುಗಾದಿಯಂತೆ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರ್ಎಸ್ಎಸ್ ವಿಭಾಗ ಪ್ರಚಾರಕ ಪ್ರಶಾಂತ್, ಪ್ರಾಂತ್ಯ ಪ್ರಚಾರಕ ಸಿದ್ದಣ್ಣ, ನಗರಸಭೆ ಸದಸ್ಯರಾದ ರಾಕೇಶ್, ಮಂಜುನಾಥ್, ಟಿಲ್ಲಿ ಮಂಜುನಾಥ್, ಮುಖಂಡರಾದ ಸಾ.ಮಾ.ಬಾಬು, ನಾಮಲ್ ಮಂಜು, ಆಟೋ ರಮೇಶ್, ನಾಗೇಂದ್ರ, ಸತ್ಯನಾರಾಯಣ, ಮಧು, ಸಂಪರ್, ಸತೀಶ್, ಸಂದೀಪ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…