Categories: ಕೋಲಾರ

ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಡೂಂಲೈಟ್ ವೃತ್ತದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ

ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದ ವಿವೇಕಾನಂದ ವೃತ್ತದಲ್ಲಿ (ಡೂಂಲೈಟ್) ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ವಿವೇಕಾನಂದ ಮಿತ್ರ ಬಳಗದ ವತಿಯಿಂದ ಶ್ರೀರಾಮನ ಭಾವಚಿತ್ರ ಅನಾವರಣಗೊಳಿಸಿ ವಿಶೇಷ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಶ್ರೀರಾಮರ 40 ಅಡಿ ಕಟೌಟ್ ನಿರ್ಮಿಸಲಾಗಿದ್ದು, ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಸಾದ, ಪಾನಕ, ಮಜ್ಜಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಂಜೆ ದೀಪೋತ್ಸವ ಹಾಗೂ ಪಟಾಕಿ ಶೋ ಅನ್ನು ವಿವೇಕಾನಂದ ಮಿತ್ರ ಬಳಗದ ವತಿಯಿಂದ ನಡೆಸಲಾಯಿತು.

ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಚಾಲಕ ಶಂಕರ್ ನಾಯಕ್, 500 ವರ್ಷಗಳ ನಂತರ ನಮಗೆ ಪುಣ್ಯದ ದಿನ ದೊರೆತಿದ್ದು, ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಶುಭ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಆ ರಾಮನು ಒಳ್ಳೆಯ ಸೌಭಾಗ್ಯವನ್ನು ಕರುಣಿಸಲಿ ಎಂದು ಆಶಿಸಿದರು.

ಕಾರ್ಯಕ್ರಮದ ಆಯೋಜಕ, ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಹೋರಾಟ, ಬಲಿದಾನದ ಪರಿಶ್ರಮದಿಂದಾಗಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಹಿಂದೂಗಳ ಪ್ರತೀಕ ರಾಮನ ದೇವಸ್ಥಾನದ ಪ್ರಾಣಪ್ರತಿಷ್ಠಾಪನೆಯು ನಮ್ಮ ಕಾಲಘಟ್ಟದಲ್ಲಿ ಆಗಿರುವುದು ಸುದೈವದ ಸಂಗತಿಯಾಗಿದೆ. ಪ್ರತಿ ಮನೆಯಲ್ಲಿಯೂ ದೀಪಾವಳಿ, ಯುಗಾದಿಯಂತೆ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರ್‌ಎಸ್‌ಎಸ್ ವಿಭಾಗ ಪ್ರಚಾರಕ ಪ್ರಶಾಂತ್, ಪ್ರಾಂತ್ಯ ಪ್ರಚಾರಕ ಸಿದ್ದಣ್ಣ, ನಗರಸಭೆ ಸದಸ್ಯರಾದ ರಾಕೇಶ್, ಮಂಜುನಾಥ್, ಟಿಲ್ಲಿ ಮಂಜುನಾಥ್, ಮುಖಂಡರಾದ ಸಾ.ಮಾ.ಬಾಬು, ನಾಮಲ್ ಮಂಜು, ಆಟೋ ರಮೇಶ್, ನಾಗೇಂದ್ರ, ಸತ್ಯನಾರಾಯಣ, ಮಧು, ಸಂಪರ್, ಸತೀಶ್, ಸಂದೀಪ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago