ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ‘ಮೋದಿ ಮತ್ತೊಮ್ಮೆ’ ಎಂಬ ಗೋಡೆ ಬರಹ ಅಭಿಯಾನಕ್ಕೆ ಶುಕ್ರವಾರ ನಗರದಲ್ಲಿ ಬಿಜೆಪಿ ಮುಖಂಡ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ, ದೇಶದಲ್ಲಿ ಪ್ರತಿಯೊಂದು ಬೂತ್ ನಲ್ಲಿ ಕನಿಷ್ಠ ಎರಡು ಕಡೆ ಮೋದಿ ಮತ್ತೊಮ್ಮೆ ಎಂದು ಬರೆಯಲು ರಾಜ್ಯ ಮತ್ತು ಕೇಂದ್ರದಿಂದ ಸೂಚನೆಯ ಮೇರೆಗೆ ಗೋಡೆ ಬರಹ ಅಭಿಯಾನ ಆರಂಭಿಸಿದ್ದೇವೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ವಿಕಸಿತ ಭಾರತದ ಸಂಕಲ್ಪವನ್ನು ಪ್ರಧಾನಿ ಮೋದಿಯವರು ರೂಪಿಸಲು ಹೊರಟಿದ್ದಾರೆ. ಅದನ್ನು ಈಡೇರಿಸಲು ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ. ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪುತ್ತಿವೆ. ರಾಜ್ಯದ ಜನತೆ ಕೂಡಾ ಬಿಜೆಪಿ ಮತ್ತು ಮೋದಿ ಅವರ ಮೇಲಿನ ಗೌರವದಿಂದ ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಸುಭದ್ರ ಭಾರತಕ್ಕಾಗಿ ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ಮೋದಿಯವರು ಭಾರತೀಯರ ಗ್ಯಾರಂಟಿಯಾಗಿದ್ದಾರೆ. ಈ ಗೋಡೆ ಬರಹ ಅಭಿಯಾನದಿಂದ ಇಡೀ ರಾಷ್ಟ್ರದಲ್ಲಿ ಒಂದು ರೀತಿಯ ಹೊಸ ಸಂಚಲನ ಮೂಡಲಿದ್ದು, ಮುಂದಿನ ಎರಡು ತಿಂಗಳು ಬಿಜೆಪಿಯ ಕಾರ್ಯಕರ್ತರು ಹಗಲು ರಾತ್ರಿ ದುಡಿದು ಬಿಜೆಪಿಯ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸಿ ದೇಶದ ಹೆಮ್ಮೆಯ ನಾಯಕ ಮೋದಿಯವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವಲ್ಲಿ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಮುಂತಾದವರು ಇದ್ದರು
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…