ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ‘ಮೋದಿ ಮತ್ತೊಮ್ಮೆ’ ಎಂಬ ಗೋಡೆ ಬರಹ ಅಭಿಯಾನಕ್ಕೆ ಶುಕ್ರವಾರ ನಗರದಲ್ಲಿ ಬಿಜೆಪಿ ಮುಖಂಡ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ, ದೇಶದಲ್ಲಿ ಪ್ರತಿಯೊಂದು ಬೂತ್ ನಲ್ಲಿ ಕನಿಷ್ಠ ಎರಡು ಕಡೆ ಮೋದಿ ಮತ್ತೊಮ್ಮೆ ಎಂದು ಬರೆಯಲು ರಾಜ್ಯ ಮತ್ತು ಕೇಂದ್ರದಿಂದ ಸೂಚನೆಯ ಮೇರೆಗೆ ಗೋಡೆ ಬರಹ ಅಭಿಯಾನ ಆರಂಭಿಸಿದ್ದೇವೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ವಿಕಸಿತ ಭಾರತದ ಸಂಕಲ್ಪವನ್ನು ಪ್ರಧಾನಿ ಮೋದಿಯವರು ರೂಪಿಸಲು ಹೊರಟಿದ್ದಾರೆ. ಅದನ್ನು ಈಡೇರಿಸಲು ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ. ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪುತ್ತಿವೆ. ರಾಜ್ಯದ ಜನತೆ ಕೂಡಾ ಬಿಜೆಪಿ ಮತ್ತು ಮೋದಿ ಅವರ ಮೇಲಿನ ಗೌರವದಿಂದ ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಸುಭದ್ರ ಭಾರತಕ್ಕಾಗಿ ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ಮೋದಿಯವರು ಭಾರತೀಯರ ಗ್ಯಾರಂಟಿಯಾಗಿದ್ದಾರೆ. ಈ ಗೋಡೆ ಬರಹ ಅಭಿಯಾನದಿಂದ ಇಡೀ ರಾಷ್ಟ್ರದಲ್ಲಿ ಒಂದು ರೀತಿಯ ಹೊಸ ಸಂಚಲನ ಮೂಡಲಿದ್ದು, ಮುಂದಿನ ಎರಡು ತಿಂಗಳು ಬಿಜೆಪಿಯ ಕಾರ್ಯಕರ್ತರು ಹಗಲು ರಾತ್ರಿ ದುಡಿದು ಬಿಜೆಪಿಯ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸಿ ದೇಶದ ಹೆಮ್ಮೆಯ ನಾಯಕ ಮೋದಿಯವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವಲ್ಲಿ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಮುಂತಾದವರು ಇದ್ದರು
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…