ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ‘ಮೋದಿ ಮತ್ತೊಮ್ಮೆ’ ಎಂಬ ಗೋಡೆ ಬರಹ ಅಭಿಯಾನಕ್ಕೆ ಶುಕ್ರವಾರ ನಗರದಲ್ಲಿ ಬಿಜೆಪಿ ಮುಖಂಡ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ, ದೇಶದಲ್ಲಿ ಪ್ರತಿಯೊಂದು ಬೂತ್ ನಲ್ಲಿ ಕನಿಷ್ಠ ಎರಡು ಕಡೆ ಮೋದಿ ಮತ್ತೊಮ್ಮೆ ಎಂದು ಬರೆಯಲು ರಾಜ್ಯ ಮತ್ತು ಕೇಂದ್ರದಿಂದ ಸೂಚನೆಯ ಮೇರೆಗೆ ಗೋಡೆ ಬರಹ ಅಭಿಯಾನ ಆರಂಭಿಸಿದ್ದೇವೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ವಿಕಸಿತ ಭಾರತದ ಸಂಕಲ್ಪವನ್ನು ಪ್ರಧಾನಿ ಮೋದಿಯವರು ರೂಪಿಸಲು ಹೊರಟಿದ್ದಾರೆ. ಅದನ್ನು ಈಡೇರಿಸಲು ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ. ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪುತ್ತಿವೆ. ರಾಜ್ಯದ ಜನತೆ ಕೂಡಾ ಬಿಜೆಪಿ ಮತ್ತು ಮೋದಿ ಅವರ ಮೇಲಿನ ಗೌರವದಿಂದ ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಸುಭದ್ರ ಭಾರತಕ್ಕಾಗಿ ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ಮೋದಿಯವರು ಭಾರತೀಯರ ಗ್ಯಾರಂಟಿಯಾಗಿದ್ದಾರೆ. ಈ ಗೋಡೆ ಬರಹ ಅಭಿಯಾನದಿಂದ ಇಡೀ ರಾಷ್ಟ್ರದಲ್ಲಿ ಒಂದು ರೀತಿಯ ಹೊಸ ಸಂಚಲನ ಮೂಡಲಿದ್ದು, ಮುಂದಿನ ಎರಡು ತಿಂಗಳು ಬಿಜೆಪಿಯ ಕಾರ್ಯಕರ್ತರು ಹಗಲು ರಾತ್ರಿ ದುಡಿದು ಬಿಜೆಪಿಯ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸಿ ದೇಶದ ಹೆಮ್ಮೆಯ ನಾಯಕ ಮೋದಿಯವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವಲ್ಲಿ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…