Categories: ಕೋಲಾರ

ಓಂಶಕ್ತಿ ಚಲಪತಿ ನೇತೃತ್ವದಲ್ಲಿ “ಮೋದಿ ಮತ್ತೊಮ್ಮೆ” ಗೋಡೆ ಬರಹಕ್ಕೆ ಚಾಲನೆ

ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ‘ಮೋದಿ ಮತ್ತೊಮ್ಮೆ’ ಎಂಬ ಗೋಡೆ ಬರಹ ಅಭಿಯಾನಕ್ಕೆ ಶುಕ್ರವಾರ ನಗರದಲ್ಲಿ ಬಿಜೆಪಿ ಮುಖಂಡ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ  ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ, ದೇಶದಲ್ಲಿ ಪ್ರತಿಯೊಂದು ಬೂತ್ ನಲ್ಲಿ ಕನಿಷ್ಠ ಎರಡು ಕಡೆ ಮೋದಿ ಮತ್ತೊಮ್ಮೆ ಎಂದು ಬರೆಯಲು ರಾಜ್ಯ ಮತ್ತು ಕೇಂದ್ರದಿಂದ ಸೂಚನೆಯ ಮೇರೆಗೆ ಗೋಡೆ ಬರಹ ಅಭಿಯಾನ ಆರಂಭಿಸಿದ್ದೇವೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ವಿಕಸಿತ ಭಾರತದ ಸಂಕಲ್ಪವನ್ನು ಪ್ರಧಾನಿ ಮೋದಿಯವರು ರೂಪಿಸಲು ಹೊರಟಿದ್ದಾರೆ. ಅದನ್ನು ಈಡೇರಿಸಲು ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ. ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪುತ್ತಿವೆ. ರಾಜ್ಯದ ಜನತೆ ಕೂಡಾ ಬಿಜೆಪಿ ಮತ್ತು ಮೋದಿ ಅವರ ಮೇಲಿನ ಗೌರವದಿಂದ ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಸುಭದ್ರ ಭಾರತಕ್ಕಾಗಿ ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ಮೋದಿಯವರು ಭಾರತೀಯರ ಗ್ಯಾರಂಟಿಯಾಗಿದ್ದಾರೆ. ಈ ಗೋಡೆ ಬರಹ ಅಭಿಯಾನದಿಂದ ಇಡೀ ರಾಷ್ಟ್ರದಲ್ಲಿ ಒಂದು ರೀತಿಯ ಹೊಸ ಸಂಚಲನ ಮೂಡಲಿದ್ದು, ಮುಂದಿನ ಎರಡು ತಿಂಗಳು ಬಿಜೆಪಿಯ ಕಾರ್ಯಕರ್ತರು ಹಗಲು ರಾತ್ರಿ ದುಡಿದು ಬಿಜೆಪಿಯ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸಿ ದೇಶದ ಹೆಮ್ಮೆಯ ನಾಯಕ ಮೋದಿಯವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವಲ್ಲಿ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಮುಂತಾದವರು ಇದ್ದರು

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

11 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago