Categories: ಕೋಲಾರ

ಓಂಶಕ್ತಿ ಚಲಪತಿ ನೇತೃತ್ವದಲ್ಲಿ “ಮೋದಿ ಮತ್ತೊಮ್ಮೆ” ಗೋಡೆ ಬರಹಕ್ಕೆ ಚಾಲನೆ

ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ‘ಮೋದಿ ಮತ್ತೊಮ್ಮೆ’ ಎಂಬ ಗೋಡೆ ಬರಹ ಅಭಿಯಾನಕ್ಕೆ ಶುಕ್ರವಾರ ನಗರದಲ್ಲಿ ಬಿಜೆಪಿ ಮುಖಂಡ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ  ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ, ದೇಶದಲ್ಲಿ ಪ್ರತಿಯೊಂದು ಬೂತ್ ನಲ್ಲಿ ಕನಿಷ್ಠ ಎರಡು ಕಡೆ ಮೋದಿ ಮತ್ತೊಮ್ಮೆ ಎಂದು ಬರೆಯಲು ರಾಜ್ಯ ಮತ್ತು ಕೇಂದ್ರದಿಂದ ಸೂಚನೆಯ ಮೇರೆಗೆ ಗೋಡೆ ಬರಹ ಅಭಿಯಾನ ಆರಂಭಿಸಿದ್ದೇವೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ವಿಕಸಿತ ಭಾರತದ ಸಂಕಲ್ಪವನ್ನು ಪ್ರಧಾನಿ ಮೋದಿಯವರು ರೂಪಿಸಲು ಹೊರಟಿದ್ದಾರೆ. ಅದನ್ನು ಈಡೇರಿಸಲು ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ. ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪುತ್ತಿವೆ. ರಾಜ್ಯದ ಜನತೆ ಕೂಡಾ ಬಿಜೆಪಿ ಮತ್ತು ಮೋದಿ ಅವರ ಮೇಲಿನ ಗೌರವದಿಂದ ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಸುಭದ್ರ ಭಾರತಕ್ಕಾಗಿ ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ಮೋದಿಯವರು ಭಾರತೀಯರ ಗ್ಯಾರಂಟಿಯಾಗಿದ್ದಾರೆ. ಈ ಗೋಡೆ ಬರಹ ಅಭಿಯಾನದಿಂದ ಇಡೀ ರಾಷ್ಟ್ರದಲ್ಲಿ ಒಂದು ರೀತಿಯ ಹೊಸ ಸಂಚಲನ ಮೂಡಲಿದ್ದು, ಮುಂದಿನ ಎರಡು ತಿಂಗಳು ಬಿಜೆಪಿಯ ಕಾರ್ಯಕರ್ತರು ಹಗಲು ರಾತ್ರಿ ದುಡಿದು ಬಿಜೆಪಿಯ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸಿ ದೇಶದ ಹೆಮ್ಮೆಯ ನಾಯಕ ಮೋದಿಯವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವಲ್ಲಿ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಮುಂತಾದವರು ಇದ್ದರು

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago