ಓದಿದ್ದು ಮೆಕ್ಯಾನಿಕಲ್ ಇಂಜಿನಿಯರಿಂಗ್, 2 ವರ್ಷ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದ, ಆಮೇಲೆ ಲಾಕ್ ಡೌನ್ ಅವಾಂತರಿಂದ ಕೆಲಸ ಕಳೆದುಕೊಂಡ, ಲಾಕ್ ಡೌನ್ ನಂತರ ಯಾವುದೇ ಕೆಲಸ ಇಲ್ಲ, ಎಷ್ಟೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸಿಗದ ಕೆಲಸ, ಇಷ್ಟಕ್ಕೆ ಮನನೊಂದ ಯುವಕ ಕೊನೆಗೆ ಸಾವಿನ ಕದ ತಟ್ಟಿದ್ದಾನೆ.
ಈ ಯುವಕನಿಗೆ ಇನ್ನೂ 29 ವರ್ಷ. ತನ್ನ ಬದುಕು ಕಟ್ಟಿಕೊಳ್ಳಲು ಸಾಕಷ್ಟು ಅವಕಾಶಗಳು ಇದ್ದವು, ಆದರೆ, ಹತಾಶೆ ಮನೋಭಾವದಿಂದ ಸಾಯಬೇಕು ಎಂದು ನಿರ್ಧಾರ ಮಾಡಿ “No one is Responsible for My Death. I am Solely Responsible, I am a big failure” ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿ ಉಜ್ವಲ ಭವಿಷ್ಯ ಕಳೆದುಕೊಂಡಿದ್ದಾನೆ.
ದೊಡ್ಡಬಳ್ಳಾಪುರ ನಗರದ ವಿದ್ಯಾನಗರದ ನಿವಾಸಿ ಭರತ್ ಕುಮಾರ್ (29) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.
ಆ.18ರ ಸಂಜೆ 5 ಗಂಟೆ ಸಮಯದಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾನೆ. ಮುಗಿಲು ಮುಟ್ಟಿದ ಮೃತ ಕುಟುಂಬಸ್ಥನ ಆಕ್ರಂದನ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…