ಓದಿದ್ದು ಮೆಕ್ಯಾನಿಕಲ್ ಇಂಜಿನಿಯರಿಂಗ್, 2 ವರ್ಷ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದ, ಆಮೇಲೆ ಲಾಕ್ ಡೌನ್ ಅವಾಂತರಿಂದ ಕೆಲಸ ಕಳೆದುಕೊಂಡ, ಲಾಕ್ ಡೌನ್ ನಂತರ ಯಾವುದೇ ಕೆಲಸ ಇಲ್ಲ, ಎಷ್ಟೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸಿಗದ ಕೆಲಸ, ಇಷ್ಟಕ್ಕೆ ಮನನೊಂದ ಯುವಕ ಕೊನೆಗೆ ಸಾವಿನ ಕದ ತಟ್ಟಿದ್ದಾನೆ.
ಈ ಯುವಕನಿಗೆ ಇನ್ನೂ 29 ವರ್ಷ. ತನ್ನ ಬದುಕು ಕಟ್ಟಿಕೊಳ್ಳಲು ಸಾಕಷ್ಟು ಅವಕಾಶಗಳು ಇದ್ದವು, ಆದರೆ, ಹತಾಶೆ ಮನೋಭಾವದಿಂದ ಸಾಯಬೇಕು ಎಂದು ನಿರ್ಧಾರ ಮಾಡಿ “No one is Responsible for My Death. I am Solely Responsible, I am a big failure” ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿ ಉಜ್ವಲ ಭವಿಷ್ಯ ಕಳೆದುಕೊಂಡಿದ್ದಾನೆ.
ದೊಡ್ಡಬಳ್ಳಾಪುರ ನಗರದ ವಿದ್ಯಾನಗರದ ನಿವಾಸಿ ಭರತ್ ಕುಮಾರ್ (29) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.
ಆ.18ರ ಸಂಜೆ 5 ಗಂಟೆ ಸಮಯದಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾನೆ. ಮುಗಿಲು ಮುಟ್ಟಿದ ಮೃತ ಕುಟುಂಬಸ್ಥನ ಆಕ್ರಂದನ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…