ಓವರ್ ಟೇಕ್ ತಂದ ಆಪತ್ತು: ಹೈವೇಲಿ ಉರುಳಿಬಿದ್ದ ಬೃಹತ್ ಕಂಟೈನರ್: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಸಮೀಪ ನಡೆದಿದೆ.

ಅಪಘಾತದ ಭೀಕರ ದೃಶ್ಯ ಸ್ಥಳೀಯ ಹೋಟೆಲ್ ವೊಂದರ ಸಿಸಿಟಿವಿಯಲ್ಲಿ ಸರಿಯಾಗಿದೆ.

ಹೈವೇಯಲ್ಲಿ ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಯಿಂದ ಮುಂದೆ ಸಾಗುವ ಭರದಲ್ಲಿ ಪಕ್ಕದಲ್ಲಿ ಇದ್ದ ಬೈಕ್ ಗಳನ್ನ ಸೈಡ್ ಹೊಡೆಯಲು ಹೋಗಿ ಲಾರಿ ಉರುಳಿಬಿದ್ದಿದೆ.

ಅದೃಷ್ಟವಶಾತ್ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಲಾರಿ ಬೀಳೋದು ಜಸ್ಟ್ ಮಿಸ್ ಆಗಿ ಕಾರಿಗೆ ಟಚ್ ಆಗಿದೆ… ಇದ್ರಿಂದ ಕಾರಿನಲ್ಲಿದ್ದವರು ಬದುಕಿದೆವು ಅಂತ ಭಯದಿಂದಲೇ ಕಾರಿನಿಂದ ಇಳಿದಿದ್ದಾರೆ.

ಇನ್ನೂ ಲಾರಿ ಯಲ್ಲಿದ್ದ ಚಾಲಕ ಬಿಹಾರ ಮೂಲದ ಧರ್ಮೇoದ್ರ ಹಾಗೂ ಕ್ಲಿನರ್ ಲಾಲ್ ಚಂದ್ ಗಾಯಗೊಂಡಿದ್ದಾರೆ. ಇಬ್ಬರನ್ನು ದೇವನಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಅಂದಹಾಗೆ ಲಾರಿಯಲ್ಲಿ ಪ್ಲಾಸ್ಟಿಕ್ ಪೈಪ್ಗಳನ್ನ ತುಂಬಿದ್ದು ಮಧ್ಯಪ್ರದೇಶದ ಭೋಪಾಲ್ ನಿಂದ ಹೊಸಕೋಟೆಗೆ ತರಲಾಗುತ್ತಿತ್ತು ಅಂತ ತಿಳಿದುಬಂದಿದೆ.

Ramesh Babu

Journalist

Recent Posts

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

32 minutes ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

36 minutes ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

5 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

7 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

8 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

21 hours ago