ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಸಮೀಪ ನಡೆದಿದೆ.
ಅಪಘಾತದ ಭೀಕರ ದೃಶ್ಯ ಸ್ಥಳೀಯ ಹೋಟೆಲ್ ವೊಂದರ ಸಿಸಿಟಿವಿಯಲ್ಲಿ ಸರಿಯಾಗಿದೆ.
ಹೈವೇಯಲ್ಲಿ ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಯಿಂದ ಮುಂದೆ ಸಾಗುವ ಭರದಲ್ಲಿ ಪಕ್ಕದಲ್ಲಿ ಇದ್ದ ಬೈಕ್ ಗಳನ್ನ ಸೈಡ್ ಹೊಡೆಯಲು ಹೋಗಿ ಲಾರಿ ಉರುಳಿಬಿದ್ದಿದೆ.
ಅದೃಷ್ಟವಶಾತ್ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಲಾರಿ ಬೀಳೋದು ಜಸ್ಟ್ ಮಿಸ್ ಆಗಿ ಕಾರಿಗೆ ಟಚ್ ಆಗಿದೆ… ಇದ್ರಿಂದ ಕಾರಿನಲ್ಲಿದ್ದವರು ಬದುಕಿದೆವು ಅಂತ ಭಯದಿಂದಲೇ ಕಾರಿನಿಂದ ಇಳಿದಿದ್ದಾರೆ.
ಇನ್ನೂ ಲಾರಿ ಯಲ್ಲಿದ್ದ ಚಾಲಕ ಬಿಹಾರ ಮೂಲದ ಧರ್ಮೇoದ್ರ ಹಾಗೂ ಕ್ಲಿನರ್ ಲಾಲ್ ಚಂದ್ ಗಾಯಗೊಂಡಿದ್ದಾರೆ. ಇಬ್ಬರನ್ನು ದೇವನಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಅಂದಹಾಗೆ ಲಾರಿಯಲ್ಲಿ ಪ್ಲಾಸ್ಟಿಕ್ ಪೈಪ್ಗಳನ್ನ ತುಂಬಿದ್ದು ಮಧ್ಯಪ್ರದೇಶದ ಭೋಪಾಲ್ ನಿಂದ ಹೊಸಕೋಟೆಗೆ ತರಲಾಗುತ್ತಿತ್ತು ಅಂತ ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…