ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಸಮೀಪ ನಡೆದಿದೆ.
ಅಪಘಾತದ ಭೀಕರ ದೃಶ್ಯ ಸ್ಥಳೀಯ ಹೋಟೆಲ್ ವೊಂದರ ಸಿಸಿಟಿವಿಯಲ್ಲಿ ಸರಿಯಾಗಿದೆ.
ಹೈವೇಯಲ್ಲಿ ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಯಿಂದ ಮುಂದೆ ಸಾಗುವ ಭರದಲ್ಲಿ ಪಕ್ಕದಲ್ಲಿ ಇದ್ದ ಬೈಕ್ ಗಳನ್ನ ಸೈಡ್ ಹೊಡೆಯಲು ಹೋಗಿ ಲಾರಿ ಉರುಳಿಬಿದ್ದಿದೆ.
ಅದೃಷ್ಟವಶಾತ್ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಲಾರಿ ಬೀಳೋದು ಜಸ್ಟ್ ಮಿಸ್ ಆಗಿ ಕಾರಿಗೆ ಟಚ್ ಆಗಿದೆ… ಇದ್ರಿಂದ ಕಾರಿನಲ್ಲಿದ್ದವರು ಬದುಕಿದೆವು ಅಂತ ಭಯದಿಂದಲೇ ಕಾರಿನಿಂದ ಇಳಿದಿದ್ದಾರೆ.
ಇನ್ನೂ ಲಾರಿ ಯಲ್ಲಿದ್ದ ಚಾಲಕ ಬಿಹಾರ ಮೂಲದ ಧರ್ಮೇoದ್ರ ಹಾಗೂ ಕ್ಲಿನರ್ ಲಾಲ್ ಚಂದ್ ಗಾಯಗೊಂಡಿದ್ದಾರೆ. ಇಬ್ಬರನ್ನು ದೇವನಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಅಂದಹಾಗೆ ಲಾರಿಯಲ್ಲಿ ಪ್ಲಾಸ್ಟಿಕ್ ಪೈಪ್ಗಳನ್ನ ತುಂಬಿದ್ದು ಮಧ್ಯಪ್ರದೇಶದ ಭೋಪಾಲ್ ನಿಂದ ಹೊಸಕೋಟೆಗೆ ತರಲಾಗುತ್ತಿತ್ತು ಅಂತ ತಿಳಿದುಬಂದಿದೆ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…