ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಸಮೀಪ ನಡೆದಿದೆ.
ಅಪಘಾತದ ಭೀಕರ ದೃಶ್ಯ ಸ್ಥಳೀಯ ಹೋಟೆಲ್ ವೊಂದರ ಸಿಸಿಟಿವಿಯಲ್ಲಿ ಸರಿಯಾಗಿದೆ.
ಹೈವೇಯಲ್ಲಿ ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಯಿಂದ ಮುಂದೆ ಸಾಗುವ ಭರದಲ್ಲಿ ಪಕ್ಕದಲ್ಲಿ ಇದ್ದ ಬೈಕ್ ಗಳನ್ನ ಸೈಡ್ ಹೊಡೆಯಲು ಹೋಗಿ ಲಾರಿ ಉರುಳಿಬಿದ್ದಿದೆ.
ಅದೃಷ್ಟವಶಾತ್ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಲಾರಿ ಬೀಳೋದು ಜಸ್ಟ್ ಮಿಸ್ ಆಗಿ ಕಾರಿಗೆ ಟಚ್ ಆಗಿದೆ… ಇದ್ರಿಂದ ಕಾರಿನಲ್ಲಿದ್ದವರು ಬದುಕಿದೆವು ಅಂತ ಭಯದಿಂದಲೇ ಕಾರಿನಿಂದ ಇಳಿದಿದ್ದಾರೆ.
ಇನ್ನೂ ಲಾರಿ ಯಲ್ಲಿದ್ದ ಚಾಲಕ ಬಿಹಾರ ಮೂಲದ ಧರ್ಮೇoದ್ರ ಹಾಗೂ ಕ್ಲಿನರ್ ಲಾಲ್ ಚಂದ್ ಗಾಯಗೊಂಡಿದ್ದಾರೆ. ಇಬ್ಬರನ್ನು ದೇವನಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಅಂದಹಾಗೆ ಲಾರಿಯಲ್ಲಿ ಪ್ಲಾಸ್ಟಿಕ್ ಪೈಪ್ಗಳನ್ನ ತುಂಬಿದ್ದು ಮಧ್ಯಪ್ರದೇಶದ ಭೋಪಾಲ್ ನಿಂದ ಹೊಸಕೋಟೆಗೆ ತರಲಾಗುತ್ತಿತ್ತು ಅಂತ ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…