‘ಓ ನಲ್ಲ..ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ..’ ಎಂದು ಸೋದರಮಾವನೊಂದಿಗೆ ಪತ್ನಿ ರೀಲ್ಸ್ : ಮನನೊಂದ ಪತಿ ನೇಣಿಗೆ ಶರಣು

ಸದ್ಯ ಟ್ರೆಂಡಿಂಗ್ ನಲ್ಲಿರೋ ‘ಓ ನಲ್ಲ..ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ..’ ಎಂಬ ಹಾಡಿಗೆ ಸೋದರಮಾವನೊಂದಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿದ ಪತ್ನಿಯ ವರ್ತನೆಗೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ನಡೆದಿದೆ.

ಕುಮಾರ್ (33) ನೇಣಿಗೆ ಶರಣಾದ ವ್ಯಕ್ತಿ.

ಸೋದರ ಮಾವ ಮತ್ತು ಸಹೋದರಿ ಜೊತೆ ಸೇರಿ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಹಾಡಿಗೆ ಪತ್ನಿ ರೂಪಾ ರೀಲ್ಸ್ ಮಾಡಿದ್ದಳು.

ಈ ರೀಲ್ಸ್ ನ್ನ ಕುಮಾರ್ ಗೆಳೆಯರು ಹಾಗೂ ಸಂಭಂಧಿಕರು ಸಾಮಾಜಿಕ ಜಾಲತಾಣದಲ್ಲಿ ವೀಕ್ಷಿಸಿ, ಕುಮಾರ್ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ರೀಲ್ಸ್ ಡಿಲೀಟ್ ಮಾಡುವಂತೆ ಪತ್ನಿಗೆ ಕುಮಾರ್ ಮನವಿ ಮಾಡಿದ್ದು, ಪತಿಯ ಮನವಿಗೆ ರೂಪಾ ಕ್ಯಾರೆ ಎಂದಿಲ್ಲ. ಇದರಿಂದ ಮನನೊಂದ ಪತಿ ಕುಮಾರ್ ಮನೆ ಮುಂದಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ನಟ ಉಪೇಂದ್ರ ನಟನೆಯ ‘ಉಪೇಂದ್ರ’ ಸಿನಿಮಾದ ‘ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ’ ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಫುಲ್ ಟ್ರೆಂಡಿಂಗ್‌ನಲ್ಲಿದೆ. ಎಲ್ಲಿ ಹೋದರು, ಎಲ್ಲಿ ನೋಡಿದರೂ ಈ ಹಾಡು ಕೇಳುವಂತಾಗಿದೆ.

ಜನರು ಕ್ರಿಯೇಟಿವ್‌ ಆಗಿ ರೀಲ್ಸ್‌ ಮಾಡಿ ಅದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಶುರು ಮಾಡಿದ್ದಾರೆ. ಆದರೆ ಇದೇ ಸಾಂಗ್‌ ಇದೀಗ ವ್ಯಕ್ತಿಯೊಬ್ಬನ ಪ್ರಾಣವನ್ನೇ ಕಸಿದುಕೊಂಡಿದೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago