ಸದ್ಯ ಟ್ರೆಂಡಿಂಗ್ ನಲ್ಲಿರೋ ‘ಓ ನಲ್ಲ..ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ..’ ಎಂಬ ಹಾಡಿಗೆ ಸೋದರಮಾವನೊಂದಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿದ ಪತ್ನಿಯ ವರ್ತನೆಗೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ನಡೆದಿದೆ.
ಕುಮಾರ್ (33) ನೇಣಿಗೆ ಶರಣಾದ ವ್ಯಕ್ತಿ.
ಸೋದರ ಮಾವ ಮತ್ತು ಸಹೋದರಿ ಜೊತೆ ಸೇರಿ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಹಾಡಿಗೆ ಪತ್ನಿ ರೂಪಾ ರೀಲ್ಸ್ ಮಾಡಿದ್ದಳು.
ಈ ರೀಲ್ಸ್ ನ್ನ ಕುಮಾರ್ ಗೆಳೆಯರು ಹಾಗೂ ಸಂಭಂಧಿಕರು ಸಾಮಾಜಿಕ ಜಾಲತಾಣದಲ್ಲಿ ವೀಕ್ಷಿಸಿ, ಕುಮಾರ್ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ರೀಲ್ಸ್ ಡಿಲೀಟ್ ಮಾಡುವಂತೆ ಪತ್ನಿಗೆ ಕುಮಾರ್ ಮನವಿ ಮಾಡಿದ್ದು, ಪತಿಯ ಮನವಿಗೆ ರೂಪಾ ಕ್ಯಾರೆ ಎಂದಿಲ್ಲ. ಇದರಿಂದ ಮನನೊಂದ ಪತಿ ಕುಮಾರ್ ಮನೆ ಮುಂದಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ನಟ ಉಪೇಂದ್ರ ನಟನೆಯ ‘ಉಪೇಂದ್ರ’ ಸಿನಿಮಾದ ‘ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ’ ಹಾಡು ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡಿಂಗ್ನಲ್ಲಿದೆ. ಎಲ್ಲಿ ಹೋದರು, ಎಲ್ಲಿ ನೋಡಿದರೂ ಈ ಹಾಡು ಕೇಳುವಂತಾಗಿದೆ.
ಜನರು ಕ್ರಿಯೇಟಿವ್ ಆಗಿ ರೀಲ್ಸ್ ಮಾಡಿ ಅದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಶುರು ಮಾಡಿದ್ದಾರೆ. ಆದರೆ ಇದೇ ಸಾಂಗ್ ಇದೀಗ ವ್ಯಕ್ತಿಯೊಬ್ಬನ ಪ್ರಾಣವನ್ನೇ ಕಸಿದುಕೊಂಡಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…