ಕಂದಮ್ಮನನ್ನ ಹತ್ಯೆ ಮಾಡಿ ನೇಣಿಗೆ ಶರಣಾದ ತಾಯಿ.. ಕಾರಣ ಏನು ಗೊತ್ತಾ..?

ಎರಡು ವರ್ಷದ ಮುದ್ದಾದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಯಿ ಶಿವಲೀಲಾ, ಮಗಳು ವರ್ಷಿತಾ(2), ಇಬ್ಬರೂ ಸಾವಿನ ಮನೆ ಸೇರಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿಯಲಾಗಿದೆ ಎನ್ನಲಾಗಿದೆ.

ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದರೆ ಬೆಳಗಾಗೋದರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.

ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ.

ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *