ಎರಡು ವರ್ಷದ ಮುದ್ದಾದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಶಿವಲೀಲಾ, ಮಗಳು ವರ್ಷಿತಾ(2), ಇಬ್ಬರೂ ಸಾವಿನ ಮನೆ ಸೇರಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿಯಲಾಗಿದೆ ಎನ್ನಲಾಗಿದೆ.
ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದರೆ ಬೆಳಗಾಗೋದರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.
ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…