ಎರಡು ವರ್ಷದ ಮುದ್ದಾದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಶಿವಲೀಲಾ, ಮಗಳು ವರ್ಷಿತಾ(2), ಇಬ್ಬರೂ ಸಾವಿನ ಮನೆ ಸೇರಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿಯಲಾಗಿದೆ ಎನ್ನಲಾಗಿದೆ.
ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದರೆ ಬೆಳಗಾಗೋದರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.
ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…