ಎರಡು ವರ್ಷದ ಮುದ್ದಾದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಶಿವಲೀಲಾ, ಮಗಳು ವರ್ಷಿತಾ(2), ಇಬ್ಬರೂ ಸಾವಿನ ಮನೆ ಸೇರಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿಯಲಾಗಿದೆ ಎನ್ನಲಾಗಿದೆ.
ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದರೆ ಬೆಳಗಾಗೋದರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.
ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…