ಎರಡು ವರ್ಷದ ಮುದ್ದಾದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಶಿವಲೀಲಾ, ಮಗಳು ವರ್ಷಿತಾ(2), ಇಬ್ಬರೂ ಸಾವಿನ ಮನೆ ಸೇರಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿಯಲಾಗಿದೆ ಎನ್ನಲಾಗಿದೆ.
ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದರೆ ಬೆಳಗಾಗೋದರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.
ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…