ಎರಡು ವರ್ಷದ ಮುದ್ದಾದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಶಿವಲೀಲಾ, ಮಗಳು ವರ್ಷಿತಾ(2), ಇಬ್ಬರೂ ಸಾವಿನ ಮನೆ ಸೇರಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿಯಲಾಗಿದೆ ಎನ್ನಲಾಗಿದೆ.
ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದರೆ ಬೆಳಗಾಗೋದರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.
ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…