ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಫೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಧೀಕರಿಸುತ್ತ ಕಂದಾಯ ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ 75% ರಷ್ಟು ಕಂದಾಯ ವಸೂಲಾತಿಯಾಗಿದ್ದು, 2024-25ನೇ ಸಾಲಿನಲ್ಲಿ ಶೇ 88% ರಷ್ಟು ಕಂದಾಯ ವಸೂಲಾತಿಯಾಗಿದ್ದು ಮುಂದುವರೆದು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ PoS ಮಷೀನ್‌ ಬಳಸಿಕೊಂಡು ಪ್ರಸ್ತುತ 2025-26ನೇ ಸಾಲಿನಲ್ಲಿ 100% ಕಂದಾಯ ವಸೂಲಾತಿಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ.

*ಡಿಜಿಟಲ್‌ ಸೇವೆ*

ಗ್ರಾಮ ಪಂಚಾಯಿತಿಯು ಆಧುನಿಕತೆ ಬೆಳೆದಂತೆಲ್ಲ ಆಸ್ತಿ ತೆರಿಗೆಯನ್ನು ಆನ್‌ ಲೈನ್ ಮೂಲಕ ಪಾವತಿಸುವ ಸೌಲಭ್ಯಗಳನ್ನು ಸಹನೀಡಲಾಗುತ್ತಿದ್ದು ಸಾರ್ವಜನಿಕರು ಕಂದಾಯವನ್ನು ತಾವು ಇರುವಲ್ಲಿಯೇ ತೆರಿಗೆಯನ್ನು ಪಾವತಿಸಬಹುದು ಇದರಿಂದ ಸಮಯ ಮತ್ತು ಪಾರದರ್ಶಕತೆ ಹಾಗೂ ತಮ್ಮ ಬಾಕಿ ಎಷ್ಟು ಇದೆ ಎಂದು ಆನ್‌ ಲೈನ್‌ ನಲ್ಲಿಯೇ ಪರಿಶೀಲನೆ ಮಾಡಿಕೊಂಡು ತೆರಿಗೆಯನ್ನು ಪಾವತಿಸಬಹುದು.
ಅಧಿಕೃತ ವೆಬ್ ಸೈಟ್ ಗೆ https://bsk.karnataka.gov.in ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ, ಪೋನ್‌ ಪೇ, ಗೂಗಲ್‌ ಪೇ ಮೂಲಕ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಪಾವತಿ ಮಾಡಬಹುದಾಗಿದೆ.

ಕಂದಾಯ ವಸೂಲಾತಿಗೆ ವಿಶೇಷ ಅಭಿಯಾನವು ಏಪ್ರಿಲ್‌ 01 ರಿಂದ ಜೂನ್‌ 30, 2025 ರವರಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತೆರಿಗೆಯನ್ನು ಪಾವತಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಇಒ ತಿಳಿಸಿದ್ದಾರೆ.

Ramesh Babu

Journalist

Recent Posts

ಸೂಕ್ತ ಸಮಯದಲ್ಲಿ ಸಿಗದ ಚಿಕಿತ್ಸೆ: 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ‌ ಆಕ್ರಂದನ

ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…

2 hours ago

ಪ್ರಜ್ವಲ್ ರೇವಣ್ಣ….ಶಿಕ್ಷೆಯ ಪ್ರಮಾಣ ಆದರ್ಶವೇ ಅಥವಾ ಅತಿರೇಕವೇ……?

ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…

4 hours ago

ಕಂದಾಯ ದಾಖಲೆಗಳ ಗಣಕೀಕರಣ: ಭೂ ದಾಖಲೆಗಳ ರಕ್ಷಣೆ: ನಕಲಿಗೆ ಬ್ರೇಕ್

ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…

4 hours ago

ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…

18 hours ago

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

20 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

1 day ago