ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಫೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಧೀಕರಿಸುತ್ತ ಕಂದಾಯ ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ 75% ರಷ್ಟು ಕಂದಾಯ ವಸೂಲಾತಿಯಾಗಿದ್ದು, 2024-25ನೇ ಸಾಲಿನಲ್ಲಿ ಶೇ 88% ರಷ್ಟು ಕಂದಾಯ ವಸೂಲಾತಿಯಾಗಿದ್ದು ಮುಂದುವರೆದು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ PoS ಮಷೀನ್‌ ಬಳಸಿಕೊಂಡು ಪ್ರಸ್ತುತ 2025-26ನೇ ಸಾಲಿನಲ್ಲಿ 100% ಕಂದಾಯ ವಸೂಲಾತಿಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ.

*ಡಿಜಿಟಲ್‌ ಸೇವೆ*

ಗ್ರಾಮ ಪಂಚಾಯಿತಿಯು ಆಧುನಿಕತೆ ಬೆಳೆದಂತೆಲ್ಲ ಆಸ್ತಿ ತೆರಿಗೆಯನ್ನು ಆನ್‌ ಲೈನ್ ಮೂಲಕ ಪಾವತಿಸುವ ಸೌಲಭ್ಯಗಳನ್ನು ಸಹನೀಡಲಾಗುತ್ತಿದ್ದು ಸಾರ್ವಜನಿಕರು ಕಂದಾಯವನ್ನು ತಾವು ಇರುವಲ್ಲಿಯೇ ತೆರಿಗೆಯನ್ನು ಪಾವತಿಸಬಹುದು ಇದರಿಂದ ಸಮಯ ಮತ್ತು ಪಾರದರ್ಶಕತೆ ಹಾಗೂ ತಮ್ಮ ಬಾಕಿ ಎಷ್ಟು ಇದೆ ಎಂದು ಆನ್‌ ಲೈನ್‌ ನಲ್ಲಿಯೇ ಪರಿಶೀಲನೆ ಮಾಡಿಕೊಂಡು ತೆರಿಗೆಯನ್ನು ಪಾವತಿಸಬಹುದು.
ಅಧಿಕೃತ ವೆಬ್ ಸೈಟ್ ಗೆ https://bsk.karnataka.gov.in ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ, ಪೋನ್‌ ಪೇ, ಗೂಗಲ್‌ ಪೇ ಮೂಲಕ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಪಾವತಿ ಮಾಡಬಹುದಾಗಿದೆ.

ಕಂದಾಯ ವಸೂಲಾತಿಗೆ ವಿಶೇಷ ಅಭಿಯಾನವು ಏಪ್ರಿಲ್‌ 01 ರಿಂದ ಜೂನ್‌ 30, 2025 ರವರಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತೆರಿಗೆಯನ್ನು ಪಾವತಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಇಒ ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

8 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

12 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

13 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

21 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago