ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಫೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಧೀಕರಿಸುತ್ತ ಕಂದಾಯ ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ 75% ರಷ್ಟು ಕಂದಾಯ ವಸೂಲಾತಿಯಾಗಿದ್ದು, 2024-25ನೇ ಸಾಲಿನಲ್ಲಿ ಶೇ 88% ರಷ್ಟು ಕಂದಾಯ ವಸೂಲಾತಿಯಾಗಿದ್ದು ಮುಂದುವರೆದು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ PoS ಮಷೀನ್‌ ಬಳಸಿಕೊಂಡು ಪ್ರಸ್ತುತ 2025-26ನೇ ಸಾಲಿನಲ್ಲಿ 100% ಕಂದಾಯ ವಸೂಲಾತಿಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ.

*ಡಿಜಿಟಲ್‌ ಸೇವೆ*

ಗ್ರಾಮ ಪಂಚಾಯಿತಿಯು ಆಧುನಿಕತೆ ಬೆಳೆದಂತೆಲ್ಲ ಆಸ್ತಿ ತೆರಿಗೆಯನ್ನು ಆನ್‌ ಲೈನ್ ಮೂಲಕ ಪಾವತಿಸುವ ಸೌಲಭ್ಯಗಳನ್ನು ಸಹನೀಡಲಾಗುತ್ತಿದ್ದು ಸಾರ್ವಜನಿಕರು ಕಂದಾಯವನ್ನು ತಾವು ಇರುವಲ್ಲಿಯೇ ತೆರಿಗೆಯನ್ನು ಪಾವತಿಸಬಹುದು ಇದರಿಂದ ಸಮಯ ಮತ್ತು ಪಾರದರ್ಶಕತೆ ಹಾಗೂ ತಮ್ಮ ಬಾಕಿ ಎಷ್ಟು ಇದೆ ಎಂದು ಆನ್‌ ಲೈನ್‌ ನಲ್ಲಿಯೇ ಪರಿಶೀಲನೆ ಮಾಡಿಕೊಂಡು ತೆರಿಗೆಯನ್ನು ಪಾವತಿಸಬಹುದು.
ಅಧಿಕೃತ ವೆಬ್ ಸೈಟ್ ಗೆ https://bsk.karnataka.gov.in ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ, ಪೋನ್‌ ಪೇ, ಗೂಗಲ್‌ ಪೇ ಮೂಲಕ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಪಾವತಿ ಮಾಡಬಹುದಾಗಿದೆ.

ಕಂದಾಯ ವಸೂಲಾತಿಗೆ ವಿಶೇಷ ಅಭಿಯಾನವು ಏಪ್ರಿಲ್‌ 01 ರಿಂದ ಜೂನ್‌ 30, 2025 ರವರಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತೆರಿಗೆಯನ್ನು ಪಾವತಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಇಒ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

10 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago