ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಫೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಧೀಕರಿಸುತ್ತ ಕಂದಾಯ ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ 75% ರಷ್ಟು ಕಂದಾಯ ವಸೂಲಾತಿಯಾಗಿದ್ದು, 2024-25ನೇ ಸಾಲಿನಲ್ಲಿ ಶೇ 88% ರಷ್ಟು ಕಂದಾಯ ವಸೂಲಾತಿಯಾಗಿದ್ದು ಮುಂದುವರೆದು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ PoS ಮಷೀನ್‌ ಬಳಸಿಕೊಂಡು ಪ್ರಸ್ತುತ 2025-26ನೇ ಸಾಲಿನಲ್ಲಿ 100% ಕಂದಾಯ ವಸೂಲಾತಿಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ.

*ಡಿಜಿಟಲ್‌ ಸೇವೆ*

ಗ್ರಾಮ ಪಂಚಾಯಿತಿಯು ಆಧುನಿಕತೆ ಬೆಳೆದಂತೆಲ್ಲ ಆಸ್ತಿ ತೆರಿಗೆಯನ್ನು ಆನ್‌ ಲೈನ್ ಮೂಲಕ ಪಾವತಿಸುವ ಸೌಲಭ್ಯಗಳನ್ನು ಸಹನೀಡಲಾಗುತ್ತಿದ್ದು ಸಾರ್ವಜನಿಕರು ಕಂದಾಯವನ್ನು ತಾವು ಇರುವಲ್ಲಿಯೇ ತೆರಿಗೆಯನ್ನು ಪಾವತಿಸಬಹುದು ಇದರಿಂದ ಸಮಯ ಮತ್ತು ಪಾರದರ್ಶಕತೆ ಹಾಗೂ ತಮ್ಮ ಬಾಕಿ ಎಷ್ಟು ಇದೆ ಎಂದು ಆನ್‌ ಲೈನ್‌ ನಲ್ಲಿಯೇ ಪರಿಶೀಲನೆ ಮಾಡಿಕೊಂಡು ತೆರಿಗೆಯನ್ನು ಪಾವತಿಸಬಹುದು.
ಅಧಿಕೃತ ವೆಬ್ ಸೈಟ್ ಗೆ https://bsk.karnataka.gov.in ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ, ಪೋನ್‌ ಪೇ, ಗೂಗಲ್‌ ಪೇ ಮೂಲಕ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಪಾವತಿ ಮಾಡಬಹುದಾಗಿದೆ.

ಕಂದಾಯ ವಸೂಲಾತಿಗೆ ವಿಶೇಷ ಅಭಿಯಾನವು ಏಪ್ರಿಲ್‌ 01 ರಿಂದ ಜೂನ್‌ 30, 2025 ರವರಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತೆರಿಗೆಯನ್ನು ಪಾವತಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಇಒ ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 days ago